Advertisement
ಸುದ್ದಿಗಳು

ದೇಲಂಪಾಡಿಯ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ “ಅರ್ಜುನ ತೀರ್ಥಯಾತ್ರೆ” ಯಕ್ಷಗಾನ ತಾಳಮದ್ದಳೆ

Share

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಸಭಾಭವನದಲ್ಲಿ  “ಅರ್ಜುನ ತೀರ್ಥಯಾತ್ರೆ” ಯಕ್ಷಗಾನ ತಾಳಮದ್ದಳೆ ಜರಗಿತು.

ರಾಮಯ್ಯ ರೈ ಕಲ್ಲಡ್ಕ ಗುತ್ತು ಹಾಗೂ ಮನೆಯವರಿಂದ ಸೇವಾರೂಪವಾಗಿ ನೆರವೇರಿಸಲ್ಪಟ್ಟ ಈ ಕಲಾ ಕಾರ್ಯಕ್ರಮದ ಮೊದಲಿಗೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆ ಸಲ್ಲಿಸಲಾಯಿತು. ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ಅನಂತರ ನಡೆದ ತಾಳಮದ್ದಳೆಯ ಭಾಗವತರಾಗಿ ನಾರಾಯಣ ತೋರಣಗಂಡಿ, ದಯಾನಂದ ಬಂದ್ಯಡ್ಕ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆ ಮದ್ದಳೆ ಚಕ್ರತಾಳದಲ್ಲಿ ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ಕಲ್ಲಡ್ಕ ಶಿವರಾಮ ಕಲ್ಲೂರಾಯ, ವಿಷ್ಣುಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ, ವಿದ್ಯಾಭೂಷಣ ಪಂಜಾಜೆ, ಕೃಷ್ಣಪ್ಪ ಗೌಡ ಕುತ್ತಿಮುಂಡ, ಬೆಳ್ಳಿಪ್ಪಾಡಿ ಹಳೆಮನೆ ವೆಂಕಪ್ಪ ಗೌಡ ಅವರು ಸಹಕರಿಸಿದರು.

ಅತಿಥಿ ಕಲಾವಿದರಾಗಿ ಆಗಮಿಸಿದ ಕಟೀಲು ಮೇಳದ ಹಾಸ್ಯಗಾರ ರವಿಶಂಕರ ವಳಕುಂಜ ಅವರು ತಮ್ಮ ಅರ್ಥಗಾರಿಕೆಯಲ್ಲಿ ಹಾಸ್ಯದ ಹೊನಲನ್ನು ಹರಿಸಿ ಸಭಾಸದರನ್ನು ರಂಜಿಸಿದರು. ವೆಂಕಟ್ರಮಣ ಮಾಸ್ತರ್ ದೇಲಂಪಾಡಿ, ಯಂ. ರಮಾನಂದ ರೈ ದೇಲಂಪಾಡಿ, ಎ.ಜಿ ಮುದಿಯಾರು, ರಾಮನಾಯ್ಕ್ ದೇಲಂಪಾಡಿ ಅವರು ಮಿಕ್ಕುಳಿದ ಪಾತ್ರಗಳಲ್ಲಿ ಕಾಣಿಸಿಕೊಂಡರು. ಗೋಪಾಲಕೃಷ್ಣ ರೈ ಮುದಿಯಾರು ಸ್ವಾಗತಿಸಿ ಮಿಥುನ್ ರೈ ಕಲ್ಲಡ್ಕ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

2 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

8 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

9 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

9 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

17 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

18 hours ago