ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಸಭಾಭವನದಲ್ಲಿ “ಅರ್ಜುನ ತೀರ್ಥಯಾತ್ರೆ” ಯಕ್ಷಗಾನ ತಾಳಮದ್ದಳೆ ಜರಗಿತು.
ರಾಮಯ್ಯ ರೈ ಕಲ್ಲಡ್ಕ ಗುತ್ತು ಹಾಗೂ ಮನೆಯವರಿಂದ ಸೇವಾರೂಪವಾಗಿ ನೆರವೇರಿಸಲ್ಪಟ್ಟ ಈ ಕಲಾ ಕಾರ್ಯಕ್ರಮದ ಮೊದಲಿಗೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆ ಸಲ್ಲಿಸಲಾಯಿತು. ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ಅನಂತರ ನಡೆದ ತಾಳಮದ್ದಳೆಯ ಭಾಗವತರಾಗಿ ನಾರಾಯಣ ತೋರಣಗಂಡಿ, ದಯಾನಂದ ಬಂದ್ಯಡ್ಕ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆ ಮದ್ದಳೆ ಚಕ್ರತಾಳದಲ್ಲಿ ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ಕಲ್ಲಡ್ಕ ಶಿವರಾಮ ಕಲ್ಲೂರಾಯ, ವಿಷ್ಣುಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ, ವಿದ್ಯಾಭೂಷಣ ಪಂಜಾಜೆ, ಕೃಷ್ಣಪ್ಪ ಗೌಡ ಕುತ್ತಿಮುಂಡ, ಬೆಳ್ಳಿಪ್ಪಾಡಿ ಹಳೆಮನೆ ವೆಂಕಪ್ಪ ಗೌಡ ಅವರು ಸಹಕರಿಸಿದರು.
ಅತಿಥಿ ಕಲಾವಿದರಾಗಿ ಆಗಮಿಸಿದ ಕಟೀಲು ಮೇಳದ ಹಾಸ್ಯಗಾರ ರವಿಶಂಕರ ವಳಕುಂಜ ಅವರು ತಮ್ಮ ಅರ್ಥಗಾರಿಕೆಯಲ್ಲಿ ಹಾಸ್ಯದ ಹೊನಲನ್ನು ಹರಿಸಿ ಸಭಾಸದರನ್ನು ರಂಜಿಸಿದರು. ವೆಂಕಟ್ರಮಣ ಮಾಸ್ತರ್ ದೇಲಂಪಾಡಿ, ಯಂ. ರಮಾನಂದ ರೈ ದೇಲಂಪಾಡಿ, ಎ.ಜಿ ಮುದಿಯಾರು, ರಾಮನಾಯ್ಕ್ ದೇಲಂಪಾಡಿ ಅವರು ಮಿಕ್ಕುಳಿದ ಪಾತ್ರಗಳಲ್ಲಿ ಕಾಣಿಸಿಕೊಂಡರು. ಗೋಪಾಲಕೃಷ್ಣ ರೈ ಮುದಿಯಾರು ಸ್ವಾಗತಿಸಿ ಮಿಥುನ್ ರೈ ಕಲ್ಲಡ್ಕ ವಂದಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…