Advertisement
ಸುದ್ದಿಗಳು

ದೇಲಂಪಾಡಿಯ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ “ಅರ್ಜುನ ತೀರ್ಥಯಾತ್ರೆ” ಯಕ್ಷಗಾನ ತಾಳಮದ್ದಳೆ

Share

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಸಭಾಭವನದಲ್ಲಿ  “ಅರ್ಜುನ ತೀರ್ಥಯಾತ್ರೆ” ಯಕ್ಷಗಾನ ತಾಳಮದ್ದಳೆ ಜರಗಿತು.

ರಾಮಯ್ಯ ರೈ ಕಲ್ಲಡ್ಕ ಗುತ್ತು ಹಾಗೂ ಮನೆಯವರಿಂದ ಸೇವಾರೂಪವಾಗಿ ನೆರವೇರಿಸಲ್ಪಟ್ಟ ಈ ಕಲಾ ಕಾರ್ಯಕ್ರಮದ ಮೊದಲಿಗೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆ ಸಲ್ಲಿಸಲಾಯಿತು. ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ಅನಂತರ ನಡೆದ ತಾಳಮದ್ದಳೆಯ ಭಾಗವತರಾಗಿ ನಾರಾಯಣ ತೋರಣಗಂಡಿ, ದಯಾನಂದ ಬಂದ್ಯಡ್ಕ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆ ಮದ್ದಳೆ ಚಕ್ರತಾಳದಲ್ಲಿ ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ಕಲ್ಲಡ್ಕ ಶಿವರಾಮ ಕಲ್ಲೂರಾಯ, ವಿಷ್ಣುಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ, ವಿದ್ಯಾಭೂಷಣ ಪಂಜಾಜೆ, ಕೃಷ್ಣಪ್ಪ ಗೌಡ ಕುತ್ತಿಮುಂಡ, ಬೆಳ್ಳಿಪ್ಪಾಡಿ ಹಳೆಮನೆ ವೆಂಕಪ್ಪ ಗೌಡ ಅವರು ಸಹಕರಿಸಿದರು.

ಅತಿಥಿ ಕಲಾವಿದರಾಗಿ ಆಗಮಿಸಿದ ಕಟೀಲು ಮೇಳದ ಹಾಸ್ಯಗಾರ ರವಿಶಂಕರ ವಳಕುಂಜ ಅವರು ತಮ್ಮ ಅರ್ಥಗಾರಿಕೆಯಲ್ಲಿ ಹಾಸ್ಯದ ಹೊನಲನ್ನು ಹರಿಸಿ ಸಭಾಸದರನ್ನು ರಂಜಿಸಿದರು. ವೆಂಕಟ್ರಮಣ ಮಾಸ್ತರ್ ದೇಲಂಪಾಡಿ, ಯಂ. ರಮಾನಂದ ರೈ ದೇಲಂಪಾಡಿ, ಎ.ಜಿ ಮುದಿಯಾರು, ರಾಮನಾಯ್ಕ್ ದೇಲಂಪಾಡಿ ಅವರು ಮಿಕ್ಕುಳಿದ ಪಾತ್ರಗಳಲ್ಲಿ ಕಾಣಿಸಿಕೊಂಡರು. ಗೋಪಾಲಕೃಷ್ಣ ರೈ ಮುದಿಯಾರು ಸ್ವಾಗತಿಸಿ ಮಿಥುನ್ ರೈ ಕಲ್ಲಡ್ಕ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

4 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

12 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago