ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಸಭಾಭವನದಲ್ಲಿ “ಅರ್ಜುನ ತೀರ್ಥಯಾತ್ರೆ” ಯಕ್ಷಗಾನ ತಾಳಮದ್ದಳೆ ಜರಗಿತು.
ರಾಮಯ್ಯ ರೈ ಕಲ್ಲಡ್ಕ ಗುತ್ತು ಹಾಗೂ ಮನೆಯವರಿಂದ ಸೇವಾರೂಪವಾಗಿ ನೆರವೇರಿಸಲ್ಪಟ್ಟ ಈ ಕಲಾ ಕಾರ್ಯಕ್ರಮದ ಮೊದಲಿಗೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆ ಸಲ್ಲಿಸಲಾಯಿತು. ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ಅನಂತರ ನಡೆದ ತಾಳಮದ್ದಳೆಯ ಭಾಗವತರಾಗಿ ನಾರಾಯಣ ತೋರಣಗಂಡಿ, ದಯಾನಂದ ಬಂದ್ಯಡ್ಕ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆ ಮದ್ದಳೆ ಚಕ್ರತಾಳದಲ್ಲಿ ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ಕಲ್ಲಡ್ಕ ಶಿವರಾಮ ಕಲ್ಲೂರಾಯ, ವಿಷ್ಣುಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ, ವಿದ್ಯಾಭೂಷಣ ಪಂಜಾಜೆ, ಕೃಷ್ಣಪ್ಪ ಗೌಡ ಕುತ್ತಿಮುಂಡ, ಬೆಳ್ಳಿಪ್ಪಾಡಿ ಹಳೆಮನೆ ವೆಂಕಪ್ಪ ಗೌಡ ಅವರು ಸಹಕರಿಸಿದರು.
ಅತಿಥಿ ಕಲಾವಿದರಾಗಿ ಆಗಮಿಸಿದ ಕಟೀಲು ಮೇಳದ ಹಾಸ್ಯಗಾರ ರವಿಶಂಕರ ವಳಕುಂಜ ಅವರು ತಮ್ಮ ಅರ್ಥಗಾರಿಕೆಯಲ್ಲಿ ಹಾಸ್ಯದ ಹೊನಲನ್ನು ಹರಿಸಿ ಸಭಾಸದರನ್ನು ರಂಜಿಸಿದರು. ವೆಂಕಟ್ರಮಣ ಮಾಸ್ತರ್ ದೇಲಂಪಾಡಿ, ಯಂ. ರಮಾನಂದ ರೈ ದೇಲಂಪಾಡಿ, ಎ.ಜಿ ಮುದಿಯಾರು, ರಾಮನಾಯ್ಕ್ ದೇಲಂಪಾಡಿ ಅವರು ಮಿಕ್ಕುಳಿದ ಪಾತ್ರಗಳಲ್ಲಿ ಕಾಣಿಸಿಕೊಂಡರು. ಗೋಪಾಲಕೃಷ್ಣ ರೈ ಮುದಿಯಾರು ಸ್ವಾಗತಿಸಿ ಮಿಥುನ್ ರೈ ಕಲ್ಲಡ್ಕ ವಂದಿಸಿದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…