ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್, ಶ್ರೀ ವಿಷ್ಣು ಯುವಕ ಮಂಡಲ, ಶಾಲಾ ಪೋಷಕರು ಹಾಗೂ ಸ್ಥಳೀಯರ ಆಶ್ರಯದಲ್ಲಿ ಮಾವಿನಕಟ್ಟೆಯಿಂದ ಅಚ್ರಪ್ಪಾಡಿವರೆಗೆ “ಸ್ವಚ್ಛತಾ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು.
ನಂತರ ಅಚ್ರಪ್ಪಾಡಿ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಸಭಾಧ್ಯಕ್ಷರಾಗಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ,ದೇವಾಚಳ್ಳ ಗ್ರಾಮ ಪಂಚಾಯತ್ ಕಾರ್ಯದರ್ಶಿ ಗುರುಪ್ರಸಾದ್, ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಶ್ರೀ ವಿಷ್ಣು ಯುವಕ ಮಂಡಲ ಕಾರ್ಯದರ್ಶಿ ಅಖಿಲ್ ಅಚ್ರಪ್ಪಾಡಿ ಹಾಗೂ ಅಚ್ರಪ್ಪಾಡಿ ಅಂಗನವಾಡಿ ಕಾರ್ಯಕರ್ತೆ ಸುಂದರಿ ಉಪಸ್ಥಿತರಿದ್ದರು.
ಈ ಸಂದರ್ಭ ಶಾಲಾ ಮಕ್ಕಳಿಂದ ಭಾಷಣ ನಡೆಯಿತು. ದಿವಾಕರ ಮುಂಡೋಡಿ ಇವರಿಂದ ಪ್ರತಿಜ್ಞಾ ವಿಧಿ ವಾಚನ, ಗಾಂಧಿ ಜಯಂತಿ ಸ್ಮರಣಾರ್ಥ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು.
ಅಚ್ರಪ್ಪಾಡಿ ಅಂಗನವಾಡಿ ಕಾರ್ಯಕರ್ತೆ ಸುಂದರಿ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಗುರಿ ಹಾಗೂ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ನಿರೂಪಣೆ ಮತ್ತು ಸ್ವಾಗತ ಶ್ವೇತಾ ಹಾಗೂ ಸವಿತಾ ಧನ್ಯವಾದ ಗೈದರು.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…