ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಹಾಗೂ ಇತರ ಸಾಂಕ್ರಾಮಿಕ ರೋಗಗಳ ಕುರಿತಾಗಿ ಗ್ರಾಮ ಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಯಿತು.
ಗ್ರಾಮ ಪಂಚಾಯತ್ಅಧ್ಯಕ್ಷರಾದ ದಿವಾಕರ ಮುಂಡೋಡಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಭುವನೇಶ್ವರಿ ಹೆಚ್ , ಸದಸ್ಯರಾದ ಕೃಷ್ಣಯ್ಯ ಮೂಲೆತೋಟ , ಶೈಲೇಶ್ ಅಂಬೆಕಲ್ಲು , ದೇವಚಳ್ಳ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕರು ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಕಂದಾಯ ಸಹಾಯಕರು ದೀಪಕ್, ಜ್ಞಾನ ದೀಪ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್ ಸ್ವಾಗತಿಸಿ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ ನಮ್ಮನ್ನು ಹಾಗೂ ಎಲ್ಲರನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳು ಮತ್ತು ಈ ಸೋಂಕನ್ನು ನಿವಾರಿಸುವ ಬಗ್ಗೆ ಸಂಘಟಿತ ಜವಾಬ್ದಾರಿಗಳ ಬಗ್ಗೆ ಮತ್ತು ಆರೋಗ್ಯ ಸಹಾಯಕರು ನಾಗರಿಕನ ಜವಾಬ್ದಾರಿಗಳ ಬಗ್ಗೆ ಅನುಸರಿಸಬೇಕಾದ ವೈದ್ಯಕೀಯ ಅಂಶಗಳನ್ನು ತಿಳಿಸಿದರು. ಬಳಿಕ ಸಮಿತಿಯನ್ನು ರಚಿಸಲಾಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…