ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಹಾಗೂ ಇತರ ಸಾಂಕ್ರಾಮಿಕ ರೋಗಗಳ ಕುರಿತಾಗಿ ಗ್ರಾಮ ಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಯಿತು.
ಗ್ರಾಮ ಪಂಚಾಯತ್ಅಧ್ಯಕ್ಷರಾದ ದಿವಾಕರ ಮುಂಡೋಡಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಭುವನೇಶ್ವರಿ ಹೆಚ್ , ಸದಸ್ಯರಾದ ಕೃಷ್ಣಯ್ಯ ಮೂಲೆತೋಟ , ಶೈಲೇಶ್ ಅಂಬೆಕಲ್ಲು , ದೇವಚಳ್ಳ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕರು ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಕಂದಾಯ ಸಹಾಯಕರು ದೀಪಕ್, ಜ್ಞಾನ ದೀಪ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್ ಸ್ವಾಗತಿಸಿ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ ನಮ್ಮನ್ನು ಹಾಗೂ ಎಲ್ಲರನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳು ಮತ್ತು ಈ ಸೋಂಕನ್ನು ನಿವಾರಿಸುವ ಬಗ್ಗೆ ಸಂಘಟಿತ ಜವಾಬ್ದಾರಿಗಳ ಬಗ್ಗೆ ಮತ್ತು ಆರೋಗ್ಯ ಸಹಾಯಕರು ನಾಗರಿಕನ ಜವಾಬ್ದಾರಿಗಳ ಬಗ್ಗೆ ಅನುಸರಿಸಬೇಕಾದ ವೈದ್ಯಕೀಯ ಅಂಶಗಳನ್ನು ತಿಳಿಸಿದರು. ಬಳಿಕ ಸಮಿತಿಯನ್ನು ರಚಿಸಲಾಯಿತು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…