Advertisement
ಸುದ್ದಿಗಳು

ದೇವಚಳ್ಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Share

ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ  ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ ಉಪಸ್ಥಿತಿಯಲ್ಲಿ  ನಡೆಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಪಿ. ಡಿ. ಓ ಕಾವ್ಯ ಸಿ. ಎನ್ , ಕಾರ್ಯದರ್ಶಿ ಗುರುಪ್ರಸಾದ್ ಮತ್ತು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ  ಭುವನೇಶ್ವರಿ ಹೆಚ್,  ಸದಸ್ಯರಾದ ಕೃಷ್ಣಯ್ಯ ಮೂಲೆತೋಟ , ಶೈಲೇಶ್ ಅಂಬೆಕಲ್ಲು , ಪುಷ್ಪಾಕರ ಮಾವಿನಕಟ್ಟೆ,  ಶಿವಪ್ರಕಾಶ್ ಅಡ್ಡನಪಾರೆ , ಮೋಹಿನಿ ಅಡ್ಡನಪಾರೆ,  ಸರಸ್ವತಿ ತಳೂರು , ಉಷಾ ದೇವ ಉಪಸ್ಥಿತರಿದ್ದರು.

ಸಭೆಯಲ್ಲಿ ಅ.2 ಗಾಂಧೀಜಯಂತಿ ದಿನದಂದು ಗ್ರಾಮ ವ್ಯಾಪ್ತಿಯ ಮಾವಿನಕಟ್ಟೆ ಬಸ್ಸು ತಂಗುದಾಣದಿಂದ ದೇವ ಬಸ್ಸು ತಂಗುದಾಣದವರಿಗೆ ಬದಿಗಳನ್ನು ಸ್ವಚ್ಛ ಗೊಳಿಸುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದಿಂದಮಾಡುವುದಾಗಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ದೇವಚಳ್ಳ ಗ್ರಾಮದಲ್ಲಿ ಡೆಂಘೆ ಪ್ರಕರಣ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಕೇವಲ ಒಂದೆರಡು ಬಿಟ್ಟರೆ ಉಳಿದದಂತೆ ಆರೋಗ್ಯಕರ ವಾತವರಣ ಇದೆ ಎಂದು ಕಿರಿಯ ಆರೋಗ್ಯ ಸಹಾಯಕ ಬಸವರಾಜು ಅವರು ಹರ್ಷ ವ್ಯಕ್ತ ಪಡಿಸಿದರು. ಆಶಾ ಕಾರ್ಯ ಕರ್ತ್ಯೆಯರು ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿಗಳ ಲಾರ್ವಾ ಸರ್ವೇ ಫಾಗಿಂಗ್ ಮಾಡುವ ಮೂಲಕ ಸೊಳ್ಳೆ ಉತ್ಪತಿ ತಡೆಯುವಲ್ಲಿ ಶ್ರಮವಹಿಸಿದ್ದಾರೆ ಎಂದರು.

ಅದೇ ದಿನ ಅಪರಾಹ್ನ  ಕೆಡಿಪಿ ಸಭೆ ನಡೆಸಲಾಯಿತು. ಗ್ರಾಮ ವ್ಯಾಪ್ತಿಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆ, ಗ್ರಂಥಾಲಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಪಶುಸಂಗೋಪನೆ ಇಲಾಖೆಯ ಅಧಿಕಾರಿ, ಆಶಾಕಾರ್ಯಕರ್ತೆಯರು ಹಾಲು ಉತ್ಪಾದಕರ ಸಹಕಾರ ಸಂಘಧವರು, ಕೃಷಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು. ಆಯಾಯ ಇಲಾಖೆಗಳ ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

2 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

3 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

4 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago