Advertisement
ಸುದ್ದಿಗಳು

ದೇವತೆಗಳು-ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟದ ವಿರುದ್ಧ ಕ್ರಮಕ್ಕೆ ಒತ್ತಾಯ

Share
ಪುತ್ತೂರು: ಮಾರುಕಟ್ಟೆಯಲ್ಲಿ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟ ತಡೆಯಬೇಕು ಎಂದು ಒತ್ತಾಯಿಸಿ ಪುತ್ತೂರಿನ ಸಹಾಯಕ  ಕಮೀಷನರ್ ಗಳಿಗೆ, ಪುತ್ತೂರು ನಗರ ಠಾಣಾಧಿಕಾರಿಗಳಿಗೆ, ಹಾಗೂ ಪಟಾಕಿ ಮಳಿಗೆಗಳಾದ ಎ.ವಿ.ಪೈ ಟ್ರೇಡರ್ಸ್, ಶ್ರೀಧರ ಭಟ್ ಬ್ರದರ್ಸ್ ಇವರಿಗೆ ಮನವಿಯನ್ನು ಹಿಂದೂ ಜನಜಾಗೃತಿ ವೇದಿಕೆ ವತಿಯಿಂದ ನೀಡಲಾಯಿತು.
ಮಾರುಕಟ್ಟೆಯಲ್ಲಿ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟ‌ ಮಾಡಲಾಗುತ್ತಿದೆ. ಇಂತಹ ಪಟಾಕಿಗಳನ್ನು ಉರಿಸಿದಾಗ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳು ಛಿದ್ರವಾಗಿ ರಸ್ತೆಯಲ್ಲಿ, ಜನರ ಕಾಲಿನಡಿಯಲ್ಲಿ ಹಾಗೂ ವಾಹನದ ಅಡಿಯಲ್ಲಿ ಅಥವಾ ಕಸದ ಬುಟ್ಟಿಗಳಲ್ಲಿ ಬಿದ್ದಿರುವುದು‌ ಕಾಣಸಿಗುತ್ತವೆ. ಇದರಿಂದ ದೇವತೆಗಳು, ರಾಷ್ಟ್ರ ಪುರುಷರ ಚಿತ್ರಗಳಿಗೆ ಅಗೌರವವಾಗುತ್ತದೆ. ಭಾರತೀಯ ಸಂವಿಧಾನಕ್ಕನುಸಾರ ಧಾರ್ಮಿಕ ಭಾವನೆಗೆ ಘಾಸಿಗೊಳಿಸುವುದು ಒಂದು ಗಂಭೀರ ಅಪರಾಧವಾಗಿದೆ. ಇತ್ತೀಚೆಗೆ ಭಾರತದಲ್ಲಿ ಚೈನಾ ಪಟಾಕಿಗಳು ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಬಂದಿದೆ. ಇದರಲ್ಲಿ ವಿಷಕಾರಿ ರಾಸಾಯನಿಕಗಳು ಇದೆ. ಈ ಪಟಾಕಿಗಳು ಆರೋಗ್ಯದ ದೃಷ್ಟಿಯಿಂದ ಅಪಾಯವಾಗಿದೆ. ಇಂತಹ ಪಟಾಕಿಗಳನ್ನು‌ ನಿಷೇಧಿಸಬೇಕು ಎಂದು ಮನವಿಯನ್ನು ನೀಡಲಾಯಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 hour ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

13 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

13 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago