Advertisement
ಸುದ್ದಿಗಳು

ದೇವತೆಗಳು-ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟದ ವಿರುದ್ಧ ಕ್ರಮಕ್ಕೆ ಒತ್ತಾಯ

Share
ಪುತ್ತೂರು: ಮಾರುಕಟ್ಟೆಯಲ್ಲಿ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟ ತಡೆಯಬೇಕು ಎಂದು ಒತ್ತಾಯಿಸಿ ಪುತ್ತೂರಿನ ಸಹಾಯಕ  ಕಮೀಷನರ್ ಗಳಿಗೆ, ಪುತ್ತೂರು ನಗರ ಠಾಣಾಧಿಕಾರಿಗಳಿಗೆ, ಹಾಗೂ ಪಟಾಕಿ ಮಳಿಗೆಗಳಾದ ಎ.ವಿ.ಪೈ ಟ್ರೇಡರ್ಸ್, ಶ್ರೀಧರ ಭಟ್ ಬ್ರದರ್ಸ್ ಇವರಿಗೆ ಮನವಿಯನ್ನು ಹಿಂದೂ ಜನಜಾಗೃತಿ ವೇದಿಕೆ ವತಿಯಿಂದ ನೀಡಲಾಯಿತು.
ಮಾರುಕಟ್ಟೆಯಲ್ಲಿ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿ ಮಾರಾಟ‌ ಮಾಡಲಾಗುತ್ತಿದೆ. ಇಂತಹ ಪಟಾಕಿಗಳನ್ನು ಉರಿಸಿದಾಗ ದೇವತೆಗಳ ಹಾಗೂ ರಾಷ್ಟ್ರ ಪುರುಷರ ಚಿತ್ರಗಳು ಛಿದ್ರವಾಗಿ ರಸ್ತೆಯಲ್ಲಿ, ಜನರ ಕಾಲಿನಡಿಯಲ್ಲಿ ಹಾಗೂ ವಾಹನದ ಅಡಿಯಲ್ಲಿ ಅಥವಾ ಕಸದ ಬುಟ್ಟಿಗಳಲ್ಲಿ ಬಿದ್ದಿರುವುದು‌ ಕಾಣಸಿಗುತ್ತವೆ. ಇದರಿಂದ ದೇವತೆಗಳು, ರಾಷ್ಟ್ರ ಪುರುಷರ ಚಿತ್ರಗಳಿಗೆ ಅಗೌರವವಾಗುತ್ತದೆ. ಭಾರತೀಯ ಸಂವಿಧಾನಕ್ಕನುಸಾರ ಧಾರ್ಮಿಕ ಭಾವನೆಗೆ ಘಾಸಿಗೊಳಿಸುವುದು ಒಂದು ಗಂಭೀರ ಅಪರಾಧವಾಗಿದೆ. ಇತ್ತೀಚೆಗೆ ಭಾರತದಲ್ಲಿ ಚೈನಾ ಪಟಾಕಿಗಳು ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಬಂದಿದೆ. ಇದರಲ್ಲಿ ವಿಷಕಾರಿ ರಾಸಾಯನಿಕಗಳು ಇದೆ. ಈ ಪಟಾಕಿಗಳು ಆರೋಗ್ಯದ ದೃಷ್ಟಿಯಿಂದ ಅಪಾಯವಾಗಿದೆ. ಇಂತಹ ಪಟಾಕಿಗಳನ್ನು‌ ನಿಷೇಧಿಸಬೇಕು ಎಂದು ಮನವಿಯನ್ನು ನೀಡಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

9 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

20 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

20 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

20 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago