Advertisement
ಸುದ್ದಿಗಳು

ದೇವದಲ್ಲಿ 29ನೇ ವರ್ಷದ ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ

Share

ಗುತ್ತಿಗಾರು:  ಗೆಳೆಯರಬಳಗ  ದೇವ , ಜ್ಯೋತಿಲಕ್ಷ್ಮಿಮಹಿಳಾಮಂಡಲ  ದೇವ , ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ , ಅಂಗನವಾಡಿ ಬೆಂಬಲ ಸಮಿತಿ ದೇವ -ದೇವಚಳ್ಳ , ಇವುಗಳ ಜಂಟಿ ಆಶ್ರಯದಲ್ಲಿ 29ನೆ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ದೇವ  ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರ ದಲ್ಲಿ ನಡೆಯಿತು.

ಪುರುಷರ ಮೊಸರುಕುಡಿಕೆ ಮಹಿಳೆಯರ ಜಾರುಕಂಬ , 5 ವರ್ಷದ ಒಳಗಿನ ಸಾರ್ವಜನಿಕ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ , ಪುರುಷರಿಗೆ , ಮಹಿಳೆಯರಿಗೆ , ಸಾರ್ವಜನಿಕಶಾಲಾ ಮಕ್ಕಳಿಗೆ , ಶಾಲಾಮಕ್ಕಳಿಗೆ , ಅಂಗನವಾಡಿಮಕ್ಕಳಿಗೆ , ಪ್ರತ್ಯೇಕ ಆಟೋಟ ಸ್ಪರ್ಧೆ ಗಳು ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಆನಂದ ದೇವ ನಿರ್ವಹಿದರು. ಸಂಜೆ ನಡೆದ ಸಮಾರೋಪ ಸಮಾರಂಭ ದಲ್ಲಿ ಯೋಗಿಶ್ ದೇವ ಅದ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿ ದಿವಾಕರ ಮುಂಡೋಡಿ ಅಧ್ಯಕ್ಷರು ಗ್ರಾಮಪಂಚಾಯತ್ ದೇವಚಳ್ಳ ,ಸೀತಾರಾಮ ಬೆಳ್ಳಾರೆ ವಲಯ ಮೇಲ್ವಿಚಾರಕರು ಸುಬ್ರಹ್ಮಣ್ಯ ವಲಯ, ಬಾಲಕೃಷ್ಣ ಸೋನಮನೆ ಹಿರಿಯ ಗುಮಾಸ್ತ ರಬ್ಬರ್ ಖರೀದಿ ಕೇಂದ್ರ ಗುತ್ತಿಗಾರು, ವಸಂತಕುಮಾರ ಮುಂಡೋಡಿ ನಿವೃತ ಹಿರಿಯ ಗುಮಾಸ್ತ  ಪಾ . ಕೃ . ಪ . ಸ . ಸಂಘ . ನಿ ಗುತ್ತಿಗಾರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗೆಳೆಯರ ಬಳಗ ಮತ್ತು ಜ್ಯೋತಿ ಲಕ್ಷ್ಮಿ ಮಹಿಳಾ ಮಂಡಲ ಜಂಟಿಯಾಗಿ ಆಯೋಜಿಸಿದ ಅದೃಷ್ಟ ಚೀಟಿಯ ವಿಜೇತರನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು. ಗೆಳೆಯರ ಬಳಗದೇವ ಇದರ ರಂಗಮಂದಿರದ ವಿದ್ಯುತ್ ಸಂಪರ್ಕಕ್ಕೆ ಮುಂಗಡವಾಗಿ ರೂ.5000 ಸಾವಿರಗಳನ್ನು ನೀಡಿರುವ ವಸಂತ ಕುಮಾರ್ ಮುಂಡೋಡಿಯವರನ್ನು ಗೌರವಿಸಲಾಯಿತು .

ತೀರ್ಥೆಶ್ ಪಾರೆಪ್ಪಾಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿ‌ನಯಕುಮಾರ್ ಮುಳುಗಾಡು ಕಾರ್ಯಕ್ರಮ ನಿರೂಪಿಸಿದರು. ಪುನೀತ್ ರವಿ ಹಿರಿಯಡ್ಕ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

3 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

15 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

16 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

24 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago