ನಿಂತಿಕಲ್ಲು : ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವವು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ದಾಮೋದರ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ, ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಬಳಿಕ ದೇವರ ಬಲಿ ಹೊರಟು ದರ್ಶನ ಬಲಿ ನಡೆಯಿತು. ಬೆಳ್ಳಾರೆಯ ಯಕ್ಷರಂಗದವರಿಂದ ವೀರಮಣಿಕಾಳಗ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ದೇವಳದ ಪ್ರಧಾನ ಅರ್ಚಕ ವೇ.ಮೂ. ಕೆ ಸೂರ್ಯನಾರಾಯಣ ಭಟ್, ಪೂದೆ ಸುಬ್ರಹ್ಮಣ್ಯ ಉಪಾಧ್ಯಾಯ, ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಪಿ.ಆರ್ ಭಟ್, ಕಾರ್ಯದರ್ಶಿ ಅನೂಪ್ ಬಿಳಿಮಲೆ, ಉಪಾಧ್ಯಕ್ಷ ಭಾಸ್ಕರ ಮುರುಳ್ಯ, ಕೇಶವ ಭಟ್ ಮಾನಸವನ, ಕೋಶಾಧಿಕಾರಿ ಜನಾರ್ಧನ ಅಲೆಕ್ಕಾಡಿ, ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷ ದಿವಾಕರ ರೈ ಪೊಗ್ಗೊಲಿ, ಪದಾಧಿಕಾರಿಗಳು, ಉಪಸಮಿತಿ ಪದಾಧಿಕಾರಿಗಳು, ನೂರಾರು ಭಕ್ತರು ಉಪಸ್ಥಿತರಿದ್ದರು.
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…
ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…
ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು, ಪ್ರಸಕ್ತ ಜಲಾಶಯದಲ್ಲಿ 77.144…
ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…