ನಿಂತಿಕಲ್ಲು : ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವವು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ದಾಮೋದರ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ, ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಬಳಿಕ ದೇವರ ಬಲಿ ಹೊರಟು ದರ್ಶನ ಬಲಿ ನಡೆಯಿತು. ಬೆಳ್ಳಾರೆಯ ಯಕ್ಷರಂಗದವರಿಂದ ವೀರಮಣಿಕಾಳಗ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ದೇವಳದ ಪ್ರಧಾನ ಅರ್ಚಕ ವೇ.ಮೂ. ಕೆ ಸೂರ್ಯನಾರಾಯಣ ಭಟ್, ಪೂದೆ ಸುಬ್ರಹ್ಮಣ್ಯ ಉಪಾಧ್ಯಾಯ, ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಪಿ.ಆರ್ ಭಟ್, ಕಾರ್ಯದರ್ಶಿ ಅನೂಪ್ ಬಿಳಿಮಲೆ, ಉಪಾಧ್ಯಕ್ಷ ಭಾಸ್ಕರ ಮುರುಳ್ಯ, ಕೇಶವ ಭಟ್ ಮಾನಸವನ, ಕೋಶಾಧಿಕಾರಿ ಜನಾರ್ಧನ ಅಲೆಕ್ಕಾಡಿ, ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷ ದಿವಾಕರ ರೈ ಪೊಗ್ಗೊಲಿ, ಪದಾಧಿಕಾರಿಗಳು, ಉಪಸಮಿತಿ ಪದಾಧಿಕಾರಿಗಳು, ನೂರಾರು ಭಕ್ತರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…