ನಿಂತಿಕಲ್ಲು : ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವವು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ದಾಮೋದರ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ, ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಬಳಿಕ ದೇವರ ಬಲಿ ಹೊರಟು ದರ್ಶನ ಬಲಿ ನಡೆಯಿತು. ಬೆಳ್ಳಾರೆಯ ಯಕ್ಷರಂಗದವರಿಂದ ವೀರಮಣಿಕಾಳಗ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ದೇವಳದ ಪ್ರಧಾನ ಅರ್ಚಕ ವೇ.ಮೂ. ಕೆ ಸೂರ್ಯನಾರಾಯಣ ಭಟ್, ಪೂದೆ ಸುಬ್ರಹ್ಮಣ್ಯ ಉಪಾಧ್ಯಾಯ, ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಪಿ.ಆರ್ ಭಟ್, ಕಾರ್ಯದರ್ಶಿ ಅನೂಪ್ ಬಿಳಿಮಲೆ, ಉಪಾಧ್ಯಕ್ಷ ಭಾಸ್ಕರ ಮುರುಳ್ಯ, ಕೇಶವ ಭಟ್ ಮಾನಸವನ, ಕೋಶಾಧಿಕಾರಿ ಜನಾರ್ಧನ ಅಲೆಕ್ಕಾಡಿ, ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷ ದಿವಾಕರ ರೈ ಪೊಗ್ಗೊಲಿ, ಪದಾಧಿಕಾರಿಗಳು, ಉಪಸಮಿತಿ ಪದಾಧಿಕಾರಿಗಳು, ನೂರಾರು ಭಕ್ತರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…