ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ವಿಶೇಷ ಪೂಜೆ ಸಲ್ಲಿಸಿದರು.
ಶುಕ್ರವಾರ ಬೆಳಗ್ಗೆ ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿದರು. ಬಳಿಕ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು.
ನಂತರ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿಂದ ಕೊಕ್ಕಡ ವೈದ್ಯನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ,ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಇನ್ನಿತರರು ಜೊತೆಗಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…