Advertisement

ದೇವರುಳಿಯದ ಅಣ್ಣತಂಗಿಗೆ ಸಹಾಯವೆಂಬ ದೇವರೊಲಿವನೇ ?

Share

ಸುಬ್ರಹ್ಮಣ್ಯ: ಬಾಲ್ಯದಲ್ಲಿ ಹೆತ್ತವರನ್ನು ಕಳೆದುಕೊಂಡು ಈ ಎರಡು ಜೀವಗಳು ಪಡುವ ಕಷ್ಟ ಅಷ್ಟಿಷ್ಟಲ್ಲ. ಅಪ್ಪ ಅಮ್ಮನನ್ನು ಕಳಕೊಂಡ ಅಣ್ಣ-ತಂಗಿಯರು ಕಳೆದ ಹತ್ತು ವರ್ಷಗಳಿಂದ ಸಂಕಷ್ಟದಲ್ಲಿದ್ದಾರೆ. ಹರಿಹರ ಪಳ್ಳತ್ತಡ್ಕ ಗ್ರಾಮದ ದೇವರುಳಿಯ ಎಂಬಲ್ಲಿಯ ಈ ಅಣ್ಣ ತಂಗಿಯ ಸಂಕಷ್ಟಕ್ಕೆ ಸಹಾಯ ಎಂಬ ದೇವರು ಒಲಿವನೇ ?

ಹರಿಹರ ಪಳ್ಳತ್ತಡ್ಕ ಗ್ರಾಮದ ದೇವರುಳಿಯ ಎಂಬಲ್ಲಿ ವಾಸವಿದ್ದ ಲಿಂಗಪ್ಪ-ಸುಂದರಿ ದಂಪತಿಗಳಿಗೆ ಇಬ್ಬರು ಮಕ್ಕಳು. ದಂಪತಿಗಳಿಬ್ಬರು ಕೂಲಿ ಕೆಲಸ ಮಾಡುತ್ತಿದ್ದರು. ಬಂದ ಆದಾಯದಿಂದ ಸಂಸಾರ ನಡೆಸುತ್ತಿದ್ದರು. 2010 ರಲ್ಲಿ ಲಿಂಗಪ್ಪ ಅವರು ಅನಾರೋಗ್ಯದ ಮೂಲಕ ಸಾವನ್ನಪ್ಪಿದ್ದರು. ಪತಿ ಅಗಲಿಕೆ ನೋವಿಂದ ಹೊರಬರಲಾಗದಿದ್ದರೂ ಪತ್ನಿ ಸುಂದರಿ ಮಕ್ಕಳಿಬ್ಬರ ಮೊಗದಲ್ಲಿನ ನಗು ಕಂಡು ಸಂಸಾರದ ನೊಗ ಹೊರಲು ಸಿದ್ಧಳಾಗಿ ಕೂಲಿ ಮಾಡಿ ಸಾಕುವ ಜವಾಬ್ದಾರಿ ವಹಿಸಿಕೊಂಡರು. ಆದರೆ ವಿಧಿ ಅವರ ಮೇಲೂ ಕಣ್ಣಿಟ್ಟಿತು. ಕಾಯಿಲೆಗೆ ಬಲಿಯಾದ ಅವರು 2011 ರಲ್ಲಿ ಇಹಲೋಕ ತ್ಯಜಿಸಿದರು. ಬಳಿಕ ಮಕ್ಕಳಿಬ್ಬರು ತಬ್ಬಲಿಗಳಾದರು.
ಅಂದಿನಿಂದ ಇರಲು ಸರಿಯಾದ ಸೂರು ಇಲ್ಲದೆ ಅವರಿಬ್ಬರು ಮುರುಕಲು ಮನೆಯಲ್ಲಿ ವಾಸ ಮಾಡಲಾರಂಭಿಸಿದರು. ಪ್ಲಾಸ್ಟಿಕ್ ಹೊದಿಕೆಯ ಛಾವಣಿ, ಮುರುಕುಲು ಮನೆ, ಅದರ ಒಳಗೆ ವಯಸ್ಸಿಗೆ ಬಂದ ಹೆಣ್ಣು ಮಗಳು ಮತ್ತು ಯುವಕ ವಾಸವಿದ್ದಾರೆ.
ಈ ಬಡ ಕುಟುಂಬಕ್ಕೆ ಆಸ್ತಿ ಇಲ್ಲ. 94 ಸಿ ಯೋಜನೆಯಲ್ಲಿ ಹಕ್ಕು ಪತ್ರ ಸಿಕ್ಕಿದೆ. ಆದರೆ ಮೂಲಸೌಕರ್ಯ ದೊರಕಿಲ್ಲ. ವಿವಿಧ ಯೋಜನೆಯಲ್ಲಿ ಸೂರು ನಿರ್ಮಾಣಕ್ಕೆ ಅವಕಾಶಗಳಿವೆ. ಇವರಿಗೆ ಸೂಕ್ತ ಮಾರ್ಗದರ್ಶನ ನೀಡುವವರು ಯಾರೂ ಇಲ್ಲ. ಹೀಗಾಗಿ ಸರಕಾರದ ನಿವೇಶನ ಸಹಿತ ಇನ್ನಿತರ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮನೆ ಶಿಥಿಲಗೊಂಡಿದೆ, ಮಳೆಗಾಳಿಗೆ ಭೀತಿಯಿಂದ ಅದರೊಳಗೆ ಕಳೆಯಬೇಕಿದೆ. ಹೊಸ ಮನೆ ನಿರ್ಮಿಸಬೇಕು. ಯಾವುದೇ ಯೋಜನೆಯಲ್ಲಿ ಫಲಾನುಭವಿಯಾಗಿ ಇವರನ್ನು ಆಯ್ಕೆ ಮಾಡಿಕೊಂಡರು ಕಾಮಗಾರಿ ಆರಂಭಿಸದೆ ಹಣ ಬಿಡುಗಡೆಗೊಳ್ಳದೆ ಇರುವ ನಿಯಮಗಳಿಂದ ಇವರಿಗೆ ಹಣ ಹೊಂದಿಸಲು ತೊಂದರೆ ಆಗಿದೆ.
ಕೇಶವ ಅವರು ಸುಬ್ರಹ್ಮಣ್ಯದಲ್ಲಿ ಖಾಸಗಿ ವಸತಿಗೃಹದಲ್ಲಿ ರಾತ್ರಿ ಪಾಳಯದಲ್ಲಿ ಕೆಲಸ ಮಾಡುತ್ತಿದ್ದಾರೆ, ಪದ್ಮಾವತಿ ಸುಳ್ಯದಲ್ಲಿ ಖಾಸಗಿ ಕೊರಿಯರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾಳೆ. ನಿತ್ಯವೂ ನಲವತ್ತು ಕಿಮೀ ಕ್ರಮಿಸಿ ದುಡಿಯುತ್ತಿದ್ದಾರೆ. ಅದರಿಂದ ಬರುವ ಆದಾಯವು ಅಲ್ಪ.
ಕಳೆದ ಅನೇಕ ವರ್ಷಗಳಿಂದ ಈ ಸಂಕಷ್ಟ ಅನಭವಿಸುತ್ತಿದ್ದೇವೆ. ಮನೆ ಬೇಕೆಂದು ಸ್ಥಳೀಯ ಪಂಚಾಯತ್‍ಗೆ ಮನವಿ ಮಾಡಿದ್ದೇವೆ ಎಂದು ಕೇಶವ ದೇವರುಳಿಯ “ಸುಳ್ಯಸುದ್ದಿ.ಕಾಂ” ಗೆ ಹೇಳುತ್ತಾರೆ.
ಕುಟುಂಬಕ್ಕೆ ನಿವೇಶನ ಒದಗಿಸಲು ಸಿದ್ದವಿದ್ದೇವೆ. ಮುಂದಿನ ಕ್ರೀಯಾಯೋಜನೆ ಪಟ್ಟಿಯಲ್ಲಿ ಈ ಕುಟುಂಬವನ್ನು ಫಲಾನುಭವಿಯಾಗಿ ಆಯ್ಕೆ ಮಾಡಿಕೊಂಡು ಸೂರು ಒದಗಿಸುತ್ತೇವೆ ಎಂದು ಹರಿಹರ ಗ್ರಾ.ಪಂ. ಪಿಡಿಒ ಪದ್ಮನಾಭ ಪಳ್ಳಿಗದ್ದೆ “ಸುಳ್ಯಸುದ್ದಿ.ಕಾಂ” ಗೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

14 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

24 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

24 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago