Advertisement
ಸುದ್ದಿಗಳು

ದೇವಸ್ಥಾನಗಳ ಅಡುಗೆ ಕೋಣೆಗಳಿಗೆ ಸಿಸಿ ಟಿವಿ  ಕಡ್ಡಾಯವಾಗಲಿ- ಸಚಿವ ಶ್ರೀನಿವಾಸ ಪೂಜಾರಿ

Share

ಮಂಗಳೂರು:  ದೇವಸ್ಥಾನಗಳ ಅಡುಗೆ ಕೋಣೆಗಳಿಗೆ ಸಿಸಿ ಟಿವಿ ಕಡ್ಡಾಯವಾಗಬೇಕು.  ಸರಕಾರಿ ಮತ್ತು ಖಾಸಗಿ ದೇವಾಲಯಗಳಲ್ಲಿ ಸಿಸಿ ಟಿವಿಯ ಅಳವಡಿಕೆಗೆ ಶೀಘ್ರ ಸೂಚನೆ ನೀಡಿ ಅಳವಡಿಸುವಂತೆ  ದೇವಾಲಯಗಳ ಆಡಳಿತ ಮಂಡಳಿ  ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಸರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಅವರು ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ದಸರಾ ಮೆರವಣಿಗೆಗೆ ಸಂಬಂಧಪಟ್ಟಂತೆ ರಸ್ತೆ ಬದಿಯಲ್ಲಿ ಅಡಚಣೆಯಾಗುವ ಮರಗಳ ಕೊಂಬೆಗಳನ್ನು ಕಡಿಯುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದರು.
ದಸರಾ ಸಂಧರ್ಭದಲ್ಲಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಕವರ್ ಗಳಲ್ಲಿ ಪ್ರಸಾದಗಳನ್ನು ನೀಡುವುದು ಅಥವಾ ಇನ್ನಿತರ ಕಡೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ  ಹಬ್ಬ ಮತ್ತು ಉಳಿದ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಾಣಿಸಬಾರದು, ಇದರ ಕುರಿತು ಆಯಾ ದೇವಾಲಯಗಳ ಆಡಳಿತ ಮಂಡಳಿ ಗಮನ ಹರಿಸಬೇಕು ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಹೇಳಿದರು.

  ದೇಶದಲ್ಲಿ ಜಾಗತಿಕವಾಗಿ ಹಬ್ಬಿಕೊಂಡಿರುವ ಭಯೋತ್ಪಾದಕ ಕುರುಹುಗಳು ಕರಾವಳಿ ಪ್ರದೇಶದಲ್ಲಿಯೂ ಕಂಡು ಬಂದಿದೆ. ಆದ್ದರಿಂದ ಹಬ್ಬದ ಸಂಧರ್ಭಗಳಲ್ಲಿ ಅಪರಿಚಿತ ವ್ಯಕ್ತಿಗಳು  ಕಂಡು ಬಂದು ಕೆಲಸ ಕಾರ್ಯಗಳಲ್ಲಿ ಕೈಜೋಡಿಸಲು ಮುಂದಾದರೆ ಅವಕಾಶ ಕೊಡದೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ಕಳುಹಿಸಬೇಕು. ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಬೇಕು ಎಂದು ಮಂಗಳೂರು ಪೊಲೀಸ್ ಆಯುಕ್ತರು ಪಿ.ಎಸ್  ಹರ್ಷ ತಿಳಿಸಿದರು.  

ಸರಿಯಾದ ದಾಖಲಾತಿ ಹೊಂದಿದ ಗಾಡಿಗಳನ್ನು ಮೆರವಣಿಗೆಯಲ್ಲಿ ಬಳಸುವಂತೆ ಸೂಚಿಸಲಾಯಿತು. ವಿದ್ಯುತ್ ಬಳಕೆಯಲ್ಲಿ ಅತಿಯಾದ ಜಾಗರೂಕತೆ ಮುಖ್ಯ. ಆಹಾರ ವ್ಯವಸ್ಥೆಯು ಅಚ್ಚುಕಟ್ಟಾಗಿ, ಮಿತವ್ಯಯವಾಗಿ ಬಳಸುವಂತೆ ನೋಡಿಕೊಳ್ಳಬೇಕು.  ಮುಖ್ಯವಾಗಿ ವಯಸ್ಕರರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಮತ್ತು ವಿಕಲಚೇತನರಿಗೆ ವಿಶೇಷ ವ್ಯವಸ್ಥೆ ಮಾಡುವಂತೆ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಸೂಚಿಸಲಾಯಿತು.  ದಸರಾ ಸಂಧರ್ಭದಲ್ಲಿ ಪೊಲೀಸ್ ಇಲಾಖೆ ವತಿಯಿಂದ   24 ಗಂಟೆ ನಿರಂತರ ಸೇವೆ ಒದಗಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಜಿಲ್ಲಾ ಪೊಲೀಸ್ ಆಯುಕ್ತರು ಅರುಣಾಂಶು ಗಿರಿ, ಶಾಸಕ ವೇದವ್ಯಾಸ್ ಕಾಮತ್, ಮಹಾನಗರಪಾಲಿಕೆ ಆಯುಕ್ತರು ಎಸ್. ಅಜಿತ್ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

15 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago