( ಇಂಟರ್ನೆಟ್ ಚಿತ್ರ )
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮ ಪಾಲಿಸಿ ಎಂದು ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ. ಈ ನಡುವೆ ಭಾರತದಲ್ಲಿ ಕೊರೊನಾ ಹಾಟ್ಸ್ಪಾಟ್ಗಳೆಂದು ಗುರುತಿಸಿಕೊಳ್ಳದ ಪ್ರದೇಶಗಳಲ್ಲಿ , ಕೊರೊನಾ ನೆಗೆಟಿವ್ ಪ್ರಕರಣಗಳು ಇರುವ ಕಡೆ ಕೊಂಚ ಬದಲಾವಣೆ ತಂದಿದೆ. ಉಳಿದ ಕಡೆಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಇರಲಿ ಎಂದೂ ಹೇಳಿದೆ.
ಬ್ಯಾಂಕೇತರ ಸಂಸ್ಥೆಗಳು, ಸಣ್ಣ ಹಣಕಾಸು ವ್ಯವಹಾರಗಳ ಸಂಸ್ಥೆಗಳು, ಆಯುಷ್, ಕಾರ್ಮಿಕ ವರ್ಗ, ರೈತರು ಮೊದಲಾದವರಿಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಈ ವಿನಾಯಿತಿ ನೀಡಲಾಗಿದೆ. ಹಣಕಾಸು ವಲಯ, ಆರೋಗ್ಯ ಸೇವೆ, ವಾಣಿಜ್ಯ ಉದ್ಯಮ, ಸ್ವ ಉದ್ಯೋಗ, ಸಂಚಾರ ವ್ಯವಸ್ಥೆ, ಜನ ಸಂಚಾರ, ಕೃಷಿ, ಸಣ್ಣ ಕೈಗಾರಿಕೆ, ಸಾಮಾಜಿಕ ಸೇವೆ ಮೊದಲಾದ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಈ ಆದೇಶ ಹೊರಡಿಸಿದೆ.ಗ್ರಾಮೀಣ ಪ್ರದೇಶದಲ್ಲಿ ಆಹಾರ ಸಂಸ್ಕರಣೆ, ರಸ್ತೆ ಕೆಲಸಗಳು, ನೀರಾವರಿ, ನಿರ್ಮಾಣ ಕಾರ್ಯ ಮೊದಲಾದವುಗಳಿಗೆ ಅವಕಾಶ ನೀಡಲಾಗಿದೆ.
ಮತ್ತೊಂದೆಡೆ ಕೇರಳ ಸರಕಾರ ಲಾಕ್ಡೌನ್ನು ಸಡಿಲಗೊಳಿಸಿದ್ದು, ಸ್ಥಳೀಯ ನೌಕರರು, ಕ್ಷೌರಿಕರು, ರೆಸ್ಟೋರೆಂಟ್ ಗಳು, ಬುಕ್ ಸ್ಟೋರ್’ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಅಲ್ಲದೆ, ಆರೆಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಬಸ್ ಸಂಚಾರಗಳನ್ನು ಆರಂಭಿಸಿದೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…