( ಇಂಟರ್ನೆಟ್ ಚಿತ್ರ )
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮ ಪಾಲಿಸಿ ಎಂದು ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ. ಈ ನಡುವೆ ಭಾರತದಲ್ಲಿ ಕೊರೊನಾ ಹಾಟ್ಸ್ಪಾಟ್ಗಳೆಂದು ಗುರುತಿಸಿಕೊಳ್ಳದ ಪ್ರದೇಶಗಳಲ್ಲಿ , ಕೊರೊನಾ ನೆಗೆಟಿವ್ ಪ್ರಕರಣಗಳು ಇರುವ ಕಡೆ ಕೊಂಚ ಬದಲಾವಣೆ ತಂದಿದೆ. ಉಳಿದ ಕಡೆಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಇರಲಿ ಎಂದೂ ಹೇಳಿದೆ.
ಬ್ಯಾಂಕೇತರ ಸಂಸ್ಥೆಗಳು, ಸಣ್ಣ ಹಣಕಾಸು ವ್ಯವಹಾರಗಳ ಸಂಸ್ಥೆಗಳು, ಆಯುಷ್, ಕಾರ್ಮಿಕ ವರ್ಗ, ರೈತರು ಮೊದಲಾದವರಿಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಈ ವಿನಾಯಿತಿ ನೀಡಲಾಗಿದೆ. ಹಣಕಾಸು ವಲಯ, ಆರೋಗ್ಯ ಸೇವೆ, ವಾಣಿಜ್ಯ ಉದ್ಯಮ, ಸ್ವ ಉದ್ಯೋಗ, ಸಂಚಾರ ವ್ಯವಸ್ಥೆ, ಜನ ಸಂಚಾರ, ಕೃಷಿ, ಸಣ್ಣ ಕೈಗಾರಿಕೆ, ಸಾಮಾಜಿಕ ಸೇವೆ ಮೊದಲಾದ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಈ ಆದೇಶ ಹೊರಡಿಸಿದೆ.ಗ್ರಾಮೀಣ ಪ್ರದೇಶದಲ್ಲಿ ಆಹಾರ ಸಂಸ್ಕರಣೆ, ರಸ್ತೆ ಕೆಲಸಗಳು, ನೀರಾವರಿ, ನಿರ್ಮಾಣ ಕಾರ್ಯ ಮೊದಲಾದವುಗಳಿಗೆ ಅವಕಾಶ ನೀಡಲಾಗಿದೆ.
ಮತ್ತೊಂದೆಡೆ ಕೇರಳ ಸರಕಾರ ಲಾಕ್ಡೌನ್ನು ಸಡಿಲಗೊಳಿಸಿದ್ದು, ಸ್ಥಳೀಯ ನೌಕರರು, ಕ್ಷೌರಿಕರು, ರೆಸ್ಟೋರೆಂಟ್ ಗಳು, ಬುಕ್ ಸ್ಟೋರ್’ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಅಲ್ಲದೆ, ಆರೆಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಬಸ್ ಸಂಚಾರಗಳನ್ನು ಆರಂಭಿಸಿದೆ.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…