Advertisement
ಸುದ್ದಿಗಳು

ದೇಶದಲ್ಲಿ ಕೊರೊನಾ ಹೆಚ್ಚುತ್ತಲೇ ಇದೆ | ಲಾಕ್ಡೌನ್ ನಿಯಮ ಪಾಲಿಸಿ | ಕೇಂದ್ರ ಸರಕಾರದಿಂದ ಸೂಚನೆ

Share

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮ ಪಾಲಿಸಿ ಎಂದು ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ.  ಈ ನಡುವೆ ಭಾರತದಲ್ಲಿ ಕೊರೊನಾ ಹಾಟ್­ಸ್ಪಾಟ್­ಗಳೆಂದು ಗುರುತಿಸಿಕೊಳ್ಳದ ಪ್ರದೇಶಗಳಲ್ಲಿ , ಕೊರೊನಾ ನೆಗೆಟಿವ್ ಪ್ರಕರಣಗಳು ಇರುವ ಕಡೆ ಕೊಂಚ  ಬದಲಾವಣೆ ತಂದಿದೆ. ಉಳಿದ ಕಡೆಗಳಲ್ಲಿ  ಕಟ್ಟುನಿಟ್ಟಿನ ನಿಯಮ ಜಾರಿ ಇರಲಿ ಎಂದೂ ಹೇಳಿದೆ.

Advertisement

ಬ್ಯಾಂಕೇತರ ಸಂಸ್ಥೆಗಳು, ಸಣ್ಣ ಹಣಕಾಸು ವ್ಯವಹಾರಗಳ ಸಂಸ್ಥೆಗಳು, ಆಯುಷ್, ಕಾರ್ಮಿಕ ವರ್ಗ, ರೈತರು ಮೊದಲಾದವರಿಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಈ ವಿನಾಯಿತಿ ನೀಡಲಾಗಿದೆ. ಹಣಕಾಸು ವಲಯ, ಆರೋಗ್ಯ ಸೇವೆ, ವಾಣಿಜ್ಯ ಉದ್ಯಮ, ಸ್ವ ಉದ್ಯೋಗ, ಸಂಚಾರ ವ್ಯವಸ್ಥೆ, ಜನ ಸಂಚಾರ, ಕೃಷಿ, ಸಣ್ಣ ಕೈಗಾರಿಕೆ, ಸಾಮಾಜಿಕ ಸೇವೆ ಮೊದಲಾದ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಈ ಆದೇಶ ಹೊರಡಿಸಿದೆ.ಗ್ರಾಮೀಣ ಪ್ರದೇಶದಲ್ಲಿ ಆಹಾರ ಸಂಸ್ಕರಣೆ, ರಸ್ತೆ ಕೆಲಸಗಳು, ನೀರಾವರಿ, ನಿರ್ಮಾಣ ಕಾರ್ಯ ಮೊದಲಾದವುಗಳಿಗೆ ಅವಕಾಶ ನೀಡಲಾಗಿದೆ.

ಮತ್ತೊಂದೆಡೆ ಕೇರಳ ಸರಕಾರ ಲಾಕ್ಡೌನ್ನು ಸಡಿಲಗೊಳಿಸಿದ್ದು, ಸ್ಥಳೀಯ ನೌಕರರು, ಕ್ಷೌರಿಕರು, ರೆಸ್ಟೋರೆಂಟ್ ಗಳು, ಬುಕ್ ಸ್ಟೋರ್’ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಅಲ್ಲದೆ, ಆರೆಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಬಸ್ ಸಂಚಾರಗಳನ್ನು ಆರಂಭಿಸಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

9 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

23 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

23 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

2 days ago