Advertisement
ಸುದ್ದಿಗಳು

ದೇಶದಲ್ಲಿ ಕೊರೊನಾ ಹೆಚ್ಚುತ್ತಲೇ ಇದೆ | ಲಾಕ್ಡೌನ್ ನಿಯಮ ಪಾಲಿಸಿ | ಕೇಂದ್ರ ಸರಕಾರದಿಂದ ಸೂಚನೆ

Share

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮ ಪಾಲಿಸಿ ಎಂದು ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ.  ಈ ನಡುವೆ ಭಾರತದಲ್ಲಿ ಕೊರೊನಾ ಹಾಟ್­ಸ್ಪಾಟ್­ಗಳೆಂದು ಗುರುತಿಸಿಕೊಳ್ಳದ ಪ್ರದೇಶಗಳಲ್ಲಿ , ಕೊರೊನಾ ನೆಗೆಟಿವ್ ಪ್ರಕರಣಗಳು ಇರುವ ಕಡೆ ಕೊಂಚ  ಬದಲಾವಣೆ ತಂದಿದೆ. ಉಳಿದ ಕಡೆಗಳಲ್ಲಿ  ಕಟ್ಟುನಿಟ್ಟಿನ ನಿಯಮ ಜಾರಿ ಇರಲಿ ಎಂದೂ ಹೇಳಿದೆ.

ಬ್ಯಾಂಕೇತರ ಸಂಸ್ಥೆಗಳು, ಸಣ್ಣ ಹಣಕಾಸು ವ್ಯವಹಾರಗಳ ಸಂಸ್ಥೆಗಳು, ಆಯುಷ್, ಕಾರ್ಮಿಕ ವರ್ಗ, ರೈತರು ಮೊದಲಾದವರಿಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಈ ವಿನಾಯಿತಿ ನೀಡಲಾಗಿದೆ. ಹಣಕಾಸು ವಲಯ, ಆರೋಗ್ಯ ಸೇವೆ, ವಾಣಿಜ್ಯ ಉದ್ಯಮ, ಸ್ವ ಉದ್ಯೋಗ, ಸಂಚಾರ ವ್ಯವಸ್ಥೆ, ಜನ ಸಂಚಾರ, ಕೃಷಿ, ಸಣ್ಣ ಕೈಗಾರಿಕೆ, ಸಾಮಾಜಿಕ ಸೇವೆ ಮೊದಲಾದ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಈ ಆದೇಶ ಹೊರಡಿಸಿದೆ.ಗ್ರಾಮೀಣ ಪ್ರದೇಶದಲ್ಲಿ ಆಹಾರ ಸಂಸ್ಕರಣೆ, ರಸ್ತೆ ಕೆಲಸಗಳು, ನೀರಾವರಿ, ನಿರ್ಮಾಣ ಕಾರ್ಯ ಮೊದಲಾದವುಗಳಿಗೆ ಅವಕಾಶ ನೀಡಲಾಗಿದೆ.

ಮತ್ತೊಂದೆಡೆ ಕೇರಳ ಸರಕಾರ ಲಾಕ್ಡೌನ್ನು ಸಡಿಲಗೊಳಿಸಿದ್ದು, ಸ್ಥಳೀಯ ನೌಕರರು, ಕ್ಷೌರಿಕರು, ರೆಸ್ಟೋರೆಂಟ್ ಗಳು, ಬುಕ್ ಸ್ಟೋರ್’ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಅಲ್ಲದೆ, ಆರೆಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಬಸ್ ಸಂಚಾರಗಳನ್ನು ಆರಂಭಿಸಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

15 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago