( ಇಂಟರ್ನೆಟ್ ಚಿತ್ರ )
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮ ಪಾಲಿಸಿ ಎಂದು ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ. ಈ ನಡುವೆ ಭಾರತದಲ್ಲಿ ಕೊರೊನಾ ಹಾಟ್ಸ್ಪಾಟ್ಗಳೆಂದು ಗುರುತಿಸಿಕೊಳ್ಳದ ಪ್ರದೇಶಗಳಲ್ಲಿ , ಕೊರೊನಾ ನೆಗೆಟಿವ್ ಪ್ರಕರಣಗಳು ಇರುವ ಕಡೆ ಕೊಂಚ ಬದಲಾವಣೆ ತಂದಿದೆ. ಉಳಿದ ಕಡೆಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಇರಲಿ ಎಂದೂ ಹೇಳಿದೆ.
ಬ್ಯಾಂಕೇತರ ಸಂಸ್ಥೆಗಳು, ಸಣ್ಣ ಹಣಕಾಸು ವ್ಯವಹಾರಗಳ ಸಂಸ್ಥೆಗಳು, ಆಯುಷ್, ಕಾರ್ಮಿಕ ವರ್ಗ, ರೈತರು ಮೊದಲಾದವರಿಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಈ ವಿನಾಯಿತಿ ನೀಡಲಾಗಿದೆ. ಹಣಕಾಸು ವಲಯ, ಆರೋಗ್ಯ ಸೇವೆ, ವಾಣಿಜ್ಯ ಉದ್ಯಮ, ಸ್ವ ಉದ್ಯೋಗ, ಸಂಚಾರ ವ್ಯವಸ್ಥೆ, ಜನ ಸಂಚಾರ, ಕೃಷಿ, ಸಣ್ಣ ಕೈಗಾರಿಕೆ, ಸಾಮಾಜಿಕ ಸೇವೆ ಮೊದಲಾದ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಈ ಆದೇಶ ಹೊರಡಿಸಿದೆ.ಗ್ರಾಮೀಣ ಪ್ರದೇಶದಲ್ಲಿ ಆಹಾರ ಸಂಸ್ಕರಣೆ, ರಸ್ತೆ ಕೆಲಸಗಳು, ನೀರಾವರಿ, ನಿರ್ಮಾಣ ಕಾರ್ಯ ಮೊದಲಾದವುಗಳಿಗೆ ಅವಕಾಶ ನೀಡಲಾಗಿದೆ.
ಮತ್ತೊಂದೆಡೆ ಕೇರಳ ಸರಕಾರ ಲಾಕ್ಡೌನ್ನು ಸಡಿಲಗೊಳಿಸಿದ್ದು, ಸ್ಥಳೀಯ ನೌಕರರು, ಕ್ಷೌರಿಕರು, ರೆಸ್ಟೋರೆಂಟ್ ಗಳು, ಬುಕ್ ಸ್ಟೋರ್’ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಅಲ್ಲದೆ, ಆರೆಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಬಸ್ ಸಂಚಾರಗಳನ್ನು ಆರಂಭಿಸಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…