ಹೊಸದಿಲ್ಲಿ: ದೇಶದ ಸರಕಾರಿ ಸ್ವಾಮ್ಯದ ಬ್ಯಾಂಕ್ ಗಳ ವಿಲೀನಕ್ಕೆ ಮತ್ತೆ ಕೇಂದ್ರ ಸರಕಾರ ಮುಂದಾಗಿದೆ. ಸಾರ್ವಜನಿಕ ರಂಗದ 10 ಪ್ರಮುಖ ಬ್ಯಾಂಕ್ ಗಳನ್ನು 4 ಬ್ಯಾಂಕ್ ಗಳಾಗಿ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಘೋಷಿಸಿದ್ದಾರೆ.
ಪಂಜಾಬ್ ನ್ಯಾಶನಲ್ ಬ್ಯಾಂಕ್, ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಯುನೈಟೆಡ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಯೂನಿಯನ್ ಬ್ಯಾಂಕ್, ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಗಳು ಒಂದಾಗಲಿದೆ. ಇಂಡಿಯನ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ ಎಂದು ಸುದ್ದಿಗೋಷ್ಟಿಯಲ್ಲಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ 18 ರಲ್ಲಿ 14 ಸಾರ್ವಜನಿಕ ರಂಗದ ಬ್ಯಾಂಕ್ ಗಳು ಲಾಭದಲ್ಲಿವೆ. ಬ್ಯಾಂಕ್ ಆಫ್ ಬರೋಡ, ವಿಜಯ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ವಿಲೀನದಿಂದ ಭಾರೀ ಲಾಭವಾಗಿದೆ ಎಂದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…