ಹೊಸದಿಲ್ಲಿ: ದೇಶದ ಸರಕಾರಿ ಸ್ವಾಮ್ಯದ ಬ್ಯಾಂಕ್ ಗಳ ವಿಲೀನಕ್ಕೆ ಮತ್ತೆ ಕೇಂದ್ರ ಸರಕಾರ ಮುಂದಾಗಿದೆ. ಸಾರ್ವಜನಿಕ ರಂಗದ 10 ಪ್ರಮುಖ ಬ್ಯಾಂಕ್ ಗಳನ್ನು 4 ಬ್ಯಾಂಕ್ ಗಳಾಗಿ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಘೋಷಿಸಿದ್ದಾರೆ.
ಪಂಜಾಬ್ ನ್ಯಾಶನಲ್ ಬ್ಯಾಂಕ್, ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಯುನೈಟೆಡ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಯೂನಿಯನ್ ಬ್ಯಾಂಕ್, ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಗಳು ಒಂದಾಗಲಿದೆ. ಇಂಡಿಯನ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ ಎಂದು ಸುದ್ದಿಗೋಷ್ಟಿಯಲ್ಲಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ 18 ರಲ್ಲಿ 14 ಸಾರ್ವಜನಿಕ ರಂಗದ ಬ್ಯಾಂಕ್ ಗಳು ಲಾಭದಲ್ಲಿವೆ. ಬ್ಯಾಂಕ್ ಆಫ್ ಬರೋಡ, ವಿಜಯ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ವಿಲೀನದಿಂದ ಭಾರೀ ಲಾಭವಾಗಿದೆ ಎಂದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…