ಹೊಸದಿಲ್ಲಿ: ದೇಶದ ಸರಕಾರಿ ಸ್ವಾಮ್ಯದ ಬ್ಯಾಂಕ್ ಗಳ ವಿಲೀನಕ್ಕೆ ಮತ್ತೆ ಕೇಂದ್ರ ಸರಕಾರ ಮುಂದಾಗಿದೆ. ಸಾರ್ವಜನಿಕ ರಂಗದ 10 ಪ್ರಮುಖ ಬ್ಯಾಂಕ್ ಗಳನ್ನು 4 ಬ್ಯಾಂಕ್ ಗಳಾಗಿ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಘೋಷಿಸಿದ್ದಾರೆ.
ಪಂಜಾಬ್ ನ್ಯಾಶನಲ್ ಬ್ಯಾಂಕ್, ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಯುನೈಟೆಡ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಯೂನಿಯನ್ ಬ್ಯಾಂಕ್, ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಗಳು ಒಂದಾಗಲಿದೆ. ಇಂಡಿಯನ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ ಎಂದು ಸುದ್ದಿಗೋಷ್ಟಿಯಲ್ಲಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ 18 ರಲ್ಲಿ 14 ಸಾರ್ವಜನಿಕ ರಂಗದ ಬ್ಯಾಂಕ್ ಗಳು ಲಾಭದಲ್ಲಿವೆ. ಬ್ಯಾಂಕ್ ಆಫ್ ಬರೋಡ, ವಿಜಯ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ವಿಲೀನದಿಂದ ಭಾರೀ ಲಾಭವಾಗಿದೆ ಎಂದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…