Advertisement
MIRROR FOCUS

ದೇಶದಲ್ಲಿ ಮೊದಲು ಕೊರೊನಾ ಪಾಸಿಟಿವ್ ಬಂದ ಕೇರಳದಲ್ಲೀಗ ನಿರಾಳ | ಕೇರಳದಲ್ಲಿ ಕೊರೊನಾ ಕಟ್ಟಿ ಹಾಕಿದ್ದು ಹೇಗೆ ? | ಕಾಸರಗೋಡು ಈಗ ಕೊರೊನಾ ಮುಕ್ತ ಜಿಲ್ಲೆ |

Share

ತಿರುವನಂತಪುರ: ಜನವರಿ 30, 2020. ದೇಶದಲ್ಲಿ ಮೊದಲು ಕೊರೊನಾ ಪಾಸಿಟಿವ್ ಕಂಡುಬಂದ ದಿನ.

Advertisement
Advertisement

ದೇಶದ ಪುಟ್ಟ ರಾಜ್ಯ ಕೇರಳದಲ್ಲಿ ಕೊರೊನಾ ಪಾಸಿಟಿವ್ ಬಂದ ತಕ್ಷಣವೇ ಕೇರಳ ಸರಕಾರ ಎಚ್ಚೆತ್ತುಕೊಂಡಿತ್ತು. ಏಕೆಂದರೆ ಕೇರಳದ ಇತಿಹಾಸ ಹಾಗಿತ್ತು. ಈ ಹಿಂದೆಯೇ ನಿಫಾ ಕೇರಳವನ್ನು ಕಾಡಿತ್ತು.ನಿಫಾ ಕಲಿಸಿದ ಪಾಠ  ಕೊರೊನಾ ನಿಯಂತ್ರಣಕ್ಕೆ ಸಹಕಾರಿಯಾಯಿತು. ಈಗ ಸತತ 3 ತಿಂಗಳ ಪ್ರಯತ್ನದಲ್ಲಿ  ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದಿದೆ.ಅದೂ ಅಲ್ಲದೆ ಅತೀ ಕಡಿಮೆ ಸಂಖ್ಯೆಯಲ್ಲಿ  ಅಂದರೆ ಕೇವಲ 4 ಮಂದಿ ಮಾತ್ರವೇ ಮೃತಪಟ್ಟಿದ್ದಾರೆ.

ಕೇರಳ ಸರಕಾರ ಮಾಡಿದ್ದು ಕ್ವಾರಂಟೈನ್ ಕಟ್ಟುನಿಟ್ಟಾಗಿ ಆಚರಣೆ ಹಾಗೂ ಜನರಲ್ಲಿ ಜಾಗೃತಿ. ಅದೆಷ್ಟೂ ಜಾಗೃತಿ ವಿಡಿಯೋಗಳು ಜನರ ಮೊಬೈಲ್ ಗಳಲ್ಲಿ  ಹರಿದಾಡಿತು. ಸಣ್ಣ ಸಣ್ಣ ಸಂಘಟನೆಗಳೂ ಜಾಗೃತಿ ಮೂಡಿಸಿದರು. ಸ್ಯಾನಿಟೈಸರ್ ಬಳಕೆ, ಮಾಸ್ಕ್ , ಸಾಮಾಜಿಕ ಅಂತರ, ಖರೀದಿಗಳಲ್ಲಿ  ನಿಯಂತ್ರಣ ಸೇರಿದಂತೆ ಹಲವು ವಿಧಾನಗಳನ್ನು  ಕಟ್ಟುನಿಟ್ಟಾಗಿ ಜಾರಿಗೆ ತರಲು ಸರಕಾರ ಸೂಚಿಸಿತು, ಜನರು ಸ್ವಯಂ ರಕ್ಷಣೆಗೆ ಕಟ್ಟುನಿಟ್ಟಾಗಿ ಅವರೇ ಆಚರಣೆ ತಂದರು ಎನ್ನುವುದು  ಗಮನಾರ್ಹ.

ಚೀನಾದ ವುಹಾನ್‌ನಿಂದ ಬಂದಿದ್ದ ಕೇರಳದ ವಿದ್ಯಾರ್ಥಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದ ತಕ್ಷಣವೇ ಕೇರಳ ಸರಕಾರ ಎಚ್ಚೆತ್ತುಕೊಂಡಿತು. ಏಕೆಂದರೆ ಅದಾದಗಲೇ ವುಹಾನ್ ನಲ್ಲಿ  ಕೊರೊನಾ ವ್ಯಾಪಕವಾಗಿತ್ತು, 150 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಚೀನಾ ವುಹಾನ್ ನಲ್ಲಿ ಸತತ ಪ್ರಯತ್ನ ಮಾಡುತ್ತಿತ್ತು. ಹೀಗಾಗಿ ಕೇರಳ ಸರಕಾರ ತಕ್ಷಣವೇ ಸಿದ್ದವಾಗಿತ್ತು. ಹಾಗಿದ್ದರೂ ಕೊರೊನಾ ವೈರಸ್ ಕೇರಳದಲ್ಲಿ  ಹರಡಿತ್ತು,  ಇದುವರೆಗೆ 503 ಕೊರೊನಾ ವೈರಸ್ ಪ್ರಕರಣ ಕಂಡುಬಂದಿತ್ತು. ಅದರಲ್ಲೂ ಕಾಸರಗೋಡು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ವೈರಸ್ ಹರಡಿದ ಪ್ರದೇಶವೂ ಆಗಿತ್ತು. ದೇಶದಲ್ಲಿ  ಅಧಿಕ ಪ್ರಮಾಣದಲ್ಲಿ  ಕೇರಳದಲ್ಲೇ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಈಗ ಕಾಸರಗೋಡು ಕೊರೊನಾ ಮುಕ್ತ ಜಿಲ್ಲೆಯಾಗಿದೆ. ಇಡೀ ಕೇರಳದಲ್ಲಿ 16 ಮಾತ್ರವೇ ಸಕ್ರಿಯವಾದ ಕೊರೊನಾ ಪ್ರಕರಣಗಳು ಇವೆ. ಕಳೆದ 8 ದಿನಗಳಿಂದ 6 ಮಾತ್ರಾ ಕೊರೊನಾ ಪಾಸಿಟಿವ್ ಕಂಡುಬಂದಿದೆ..!.  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡವರ ಪ್ರಮಾಣ ಶೇಕಡಾ 30 ರಷ್ಟಿದ್ದರೆ, ಕೇರಳದಲ್ಲಿ ಅದು ಶೇಕಡಾ 90 ಕ್ಕಿಂತ ಹೆಚ್ಚಿದೆ.  ಹೀಗಾಗಿ ಚೀನಾ ಸಹಿತ ಪ್ರಪಂಚದ ಎಲ್ಲಾ ರಾಷ್ಟ್ರಗಳೂ ಕೊರೊನಾ ನಿಯಂತ್ರಣಕ್ಕೆ ಹರಸಾಹಸ ಪಟ್ಟರೆ ಕೇರಳ ನಿಯಂತ್ರಣಕ್ಕೆ ತಂದಿದೆ.

 

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

10 minutes ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

22 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago