Advertisement
ರಾಷ್ಟ್ರೀಯ

ದೇಶದಲ್ಲೇ ಅಂತರ್ಜಲ ಮಟ್ಟ ತೀವ್ರ ಸ್ವರೂಪದಲ್ಲಿ ಕುಸಿಯುತ್ತಿದೆ…!

Share

ನವದೆಹಲಿ: ದೇಶದಾದ್ಯಂತ ಅಂತರ್ಜಲ ಮಟ್ಟ ತೀವ್ರ ಸ್ವರೂಪದಲ್ಲಿ ಕುಸಿತವಾಗುತ್ತಿದೆ, 2030ರ ವೇಳೆಗೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ 21 ನಗರಗಳಲ್ಲಿ ಕುಡಿಯಲು ನೀರೇ ಸಿಗುವುದಿಲ್ಲ ಎಂದು ನೀತಿ ಆಯೋಗ ಇತ್ತೀಚಿಗೆ ವರದಿ ನೀಡಿದೆ. ಇದೀಗ ಲೋಕಸಭೆಗೆ ಜಲ ಶಕ್ತಿ ಸಚಿವ ರತ್ತನ್ ಲಾಲ್ ಕಟಾರಿಯಾ ಅವರು ನೀಡಿರುವ ಹೇಳಿಕೆ ಹೆಚ್ಚು ಕಳವಳಕಾರಿಯಾಗಿದೆ. ದೇಶದ ಶೇ. 52 ರಷ್ಟು ಬಾವಿಗಳಲ್ಲಿ ಅಂತರ್ಜಲ ಕುಸಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಒಟ್ಟು 353 ತಾಲೂಕುಗಳು ಅಥವಾ ಬ್ಲಾಕ್‌ಗಳಲ್ಲಿ ಒಂಬತ್ತನ್ನು ಅತಿಯಾದ ಅಂತರ್ಜಲ ಕುಸಿತ ಪ್ರದೇಶ ಎಂದು ವರ್ಗೀಕರಿಸಲಾಗಿದೆ. ಆದರೆ ಅತಿಯಾದ ಅಂತರ್ಜಲ ಕುಸಿತ ವಿಭಾಗದಲ್ಲಿ ತಮಿಳುನಾಡಿನಲ್ಲಿ ಅತಿ ಹೆಚ್ಚು ತಾಲೂಕುಗಳಿದ್ದು, ಇಲ್ಲಿನ 358 ತಾಲೂಕುಗಳು ಅತಿ ಹಚ್ಚು ಅಂತರ್ಜಲ ಕುಸಿತ ಪ್ರದೇಶಗಳಾಗಿವೆ. ನಂತರದ ಸ್ಥಾನದಲ್ಲಿ ರಾಜಸ್ಥಾನ (164), ಉತ್ತರ ಪ್ರದೇಶ (113) ಮತ್ತು ಪಂಜಾಬ್ (105) ಇವೆ.

ಅಂತರ್ಜಲ ಹೊರತೆಗೆಯುವಿಕೆಯಿಂದಾಗಿ ತಮಿಳುನಾಡಿನಲ್ಲಿ ಅತಿ ಹೆಚ್ಚು ಅಂತರ್ಜಲ ಬಳಕೆಗೆ ಒಳಗಾದ ತಾಲೂಕುಗಳಿವೆ ಎಂದು ಲೋಕಸಭೆಯಲ್ಲಿ ಜಲಶಕ್ತಿ ರಾಜ್ಯ ಸಚಿವ ರತ್ತನ್ ಲಾಲ್ ಕಟಾರಿಯಾ ಗುರುವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ. ದೇಶದಲ್ಲಿ ಮೇಲ್ವಿಚಾರಣೆ ಮಾಡಲಾದ ಸುಮಾರು 52 ಶೇ ಬಾವಿಗಳ ಅಂತರ್ಜಲ ಮಟ್ಟ ಕುಸಿಯುತ್ತಿದೆ ಎಂದು ಅವರು ಹೇಳಿದರು.

ದೇಶದಲ್ಲಿ ಮೌಲ್ಯಮಾಪನ ಮಾಡಲಾದ 6,584 ತಾಲೂಕುಗಳಲ್ಲಿ 1,034 ಅತಿ ಹೆಚ್ಚು ಅಂತರ್ಜಲ ಕುಸಿತ ತಾಲೂಕುಗಳಾಗಿವೆ. ಇದರಲ್ಲಿ 53 ತಾಲೂಕು ಚಿಂತಾಜನಕ ಪರಿಸ್ಥಿತಿಯಲ್ಲಿವೆ, ಅರೆ-ಚಿಂತಾಜನಕ ಸ್ಥಿತಿಯಲ್ಲಿ 681 ತಾಲೂಕುಗಳಿವೆ, ಲವಣಯುಕ್ತ ವಿಭಾಗದಲ್ಲಿ 96, ಮತ್ತು ಸುರಕ್ಷಿತ ವಿಭಾಗದಲ್ಲಿ 4,520 ತಾಲೂಕುಗಳು ಇವೆ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರು, ದೆಹಲಿ, ಚೆನ್ನೈ ಮತ್ತು ಬೆಂಗಳೂರುಗಳಲ್ಲಿ 2020ರ ವೇಳೆಗೆ ಅಂತರ್ಜಲ ಮಟ್ಟ ತೀವ್ರ ಸ್ವರೂಪದಲ್ಲಿ ಕುಸಿಯಲಿದೆ. 2030ರ ವೇಳೆಗೆ ಇಲ್ಲಿ ಕುಡಿಯಲು ಅಥವಾ ಇನ್ನಿತರ ಕಾರ್ಯಕ್ಕೆ ನೀರೇ ಸಿಗುವುದಿಲ್ಲ ಎಂಬ ಆತಂಕಕಾರಿ ವರದಿಯನ್ನು ಇತ್ತೀಚಿಗೆ ನೀತಿ ಆಯೋಗ ನೀಡಿತ್ತು.

ಮಾಹಿತಿ ಸಹಕಾರ :  www.news13.in

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

6 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

7 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

20 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

20 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago