ದೇಶದ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಬೇಕು – ಲಕ್ಷ್ಮೀಶ ಚೊಕ್ಕಾಡಿ

August 15, 2019
3:58 PM

ಪೈಲಾರ್: ಪರಕೀಯರ ಆಕ್ರಮಣವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ನಾವು ಇಂದು ನಮ್ಮದೇ ಸಮಸ್ಯೆ ಗಳಿಂದ ನಲುಗಿ ಹೋಗಿದ್ದೇವೆ.ದೇಶದ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಬೇಕು. ಗಾಂಧಿ ತತ್ವಗಳನ್ನು ರೂಢಿಸಿಕೊಂಡ ಜೀವನ ನಮ್ಮದಾಗಬೇಕು ಎಂದು ಹಿರಿಯ ಸಾಹಿತಿ ,ಶಿಕ್ಷಕ ಲಕ್ಷ್ಮೀಶ ಚೊಕ್ಕಾಡಿ ಹೇಳಿದರು.

ಫ್ರೆಂಡ್ಸ್ ಕ್ಲಬ್ ಪೈಲಾರು ಮತ್ತು ಶೌರ್ಯ ಯುವತಿ ಮಂಡಲ ಪೈಲಾರು ಇವರುಗಳ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಯಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದ ರು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಮೂಕಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಕ್ಲಬ್ ನ ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಮತ್ತು ಶೌರ್ಯ ಯುವತಿ ಮಂಡಲದ ಉಪಾಧ್ಯಕ್ಷೆ ಚರಿಷ್ಮಾ ಕಡಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾತ್ವಿಕ್ ಮಡಪ್ಪಾಡಿ ಸ್ವಾಗತಿಸಿ, ರಶ್ಮಿ ರಜನೀಕಾಂತ್ ಧನ್ಯವಾದಗೈದರು . ಸೌಂದರ್ಯ ಕಡಪಳ ನಿರೂಪಿಸಿದರು.
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸ್ವಾತಂತ್ರ್ಯ ಸಂಗ್ರಾಮದ ನೈಜ ಚಿತ್ರಣ ಬಿಂಬಿಸುವ ಆಸ್ಕರ್ ಪ್ರಶಸ್ತಿ ಪುರಸ್ಕೃತ “ಗಾಂಧಿ” ಚಲನಚಿತ್ರ ಪ್ರದರ್ಶಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror