ಪೈಲಾರ್: ಪರಕೀಯರ ಆಕ್ರಮಣವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ನಾವು ಇಂದು ನಮ್ಮದೇ ಸಮಸ್ಯೆ ಗಳಿಂದ ನಲುಗಿ ಹೋಗಿದ್ದೇವೆ.ದೇಶದ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಬೇಕು. ಗಾಂಧಿ ತತ್ವಗಳನ್ನು ರೂಢಿಸಿಕೊಂಡ ಜೀವನ ನಮ್ಮದಾಗಬೇಕು ಎಂದು ಹಿರಿಯ ಸಾಹಿತಿ ,ಶಿಕ್ಷಕ ಲಕ್ಷ್ಮೀಶ ಚೊಕ್ಕಾಡಿ ಹೇಳಿದರು.
ಫ್ರೆಂಡ್ಸ್ ಕ್ಲಬ್ ಪೈಲಾರು ಮತ್ತು ಶೌರ್ಯ ಯುವತಿ ಮಂಡಲ ಪೈಲಾರು ಇವರುಗಳ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಯಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದ ರು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಮೂಕಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಕ್ಲಬ್ ನ ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಮತ್ತು ಶೌರ್ಯ ಯುವತಿ ಮಂಡಲದ ಉಪಾಧ್ಯಕ್ಷೆ ಚರಿಷ್ಮಾ ಕಡಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾತ್ವಿಕ್ ಮಡಪ್ಪಾಡಿ ಸ್ವಾಗತಿಸಿ, ರಶ್ಮಿ ರಜನೀಕಾಂತ್ ಧನ್ಯವಾದಗೈದರು . ಸೌಂದರ್ಯ ಕಡಪಳ ನಿರೂಪಿಸಿದರು.
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸ್ವಾತಂತ್ರ್ಯ ಸಂಗ್ರಾಮದ ನೈಜ ಚಿತ್ರಣ ಬಿಂಬಿಸುವ ಆಸ್ಕರ್ ಪ್ರಶಸ್ತಿ ಪುರಸ್ಕೃತ “ಗಾಂಧಿ” ಚಲನಚಿತ್ರ ಪ್ರದರ್ಶಿಸಲಾಯಿತು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…