ಪೈಲಾರ್: ಪರಕೀಯರ ಆಕ್ರಮಣವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ನಾವು ಇಂದು ನಮ್ಮದೇ ಸಮಸ್ಯೆ ಗಳಿಂದ ನಲುಗಿ ಹೋಗಿದ್ದೇವೆ.ದೇಶದ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಬೇಕು. ಗಾಂಧಿ ತತ್ವಗಳನ್ನು ರೂಢಿಸಿಕೊಂಡ ಜೀವನ ನಮ್ಮದಾಗಬೇಕು ಎಂದು ಹಿರಿಯ ಸಾಹಿತಿ ,ಶಿಕ್ಷಕ ಲಕ್ಷ್ಮೀಶ ಚೊಕ್ಕಾಡಿ ಹೇಳಿದರು.
ಫ್ರೆಂಡ್ಸ್ ಕ್ಲಬ್ ಪೈಲಾರು ಮತ್ತು ಶೌರ್ಯ ಯುವತಿ ಮಂಡಲ ಪೈಲಾರು ಇವರುಗಳ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಯಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದ ರು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಮೂಕಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಕ್ಲಬ್ ನ ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಮತ್ತು ಶೌರ್ಯ ಯುವತಿ ಮಂಡಲದ ಉಪಾಧ್ಯಕ್ಷೆ ಚರಿಷ್ಮಾ ಕಡಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾತ್ವಿಕ್ ಮಡಪ್ಪಾಡಿ ಸ್ವಾಗತಿಸಿ, ರಶ್ಮಿ ರಜನೀಕಾಂತ್ ಧನ್ಯವಾದಗೈದರು . ಸೌಂದರ್ಯ ಕಡಪಳ ನಿರೂಪಿಸಿದರು.
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸ್ವಾತಂತ್ರ್ಯ ಸಂಗ್ರಾಮದ ನೈಜ ಚಿತ್ರಣ ಬಿಂಬಿಸುವ ಆಸ್ಕರ್ ಪ್ರಶಸ್ತಿ ಪುರಸ್ಕೃತ “ಗಾಂಧಿ” ಚಲನಚಿತ್ರ ಪ್ರದರ್ಶಿಸಲಾಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…