ಪೈಲಾರ್: ಪರಕೀಯರ ಆಕ್ರಮಣವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ನಾವು ಇಂದು ನಮ್ಮದೇ ಸಮಸ್ಯೆ ಗಳಿಂದ ನಲುಗಿ ಹೋಗಿದ್ದೇವೆ.ದೇಶದ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಬೇಕು. ಗಾಂಧಿ ತತ್ವಗಳನ್ನು ರೂಢಿಸಿಕೊಂಡ ಜೀವನ ನಮ್ಮದಾಗಬೇಕು ಎಂದು ಹಿರಿಯ ಸಾಹಿತಿ ,ಶಿಕ್ಷಕ ಲಕ್ಷ್ಮೀಶ ಚೊಕ್ಕಾಡಿ ಹೇಳಿದರು.
ಫ್ರೆಂಡ್ಸ್ ಕ್ಲಬ್ ಪೈಲಾರು ಮತ್ತು ಶೌರ್ಯ ಯುವತಿ ಮಂಡಲ ಪೈಲಾರು ಇವರುಗಳ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಯಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದ ರು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಮೂಕಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಕ್ಲಬ್ ನ ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಮತ್ತು ಶೌರ್ಯ ಯುವತಿ ಮಂಡಲದ ಉಪಾಧ್ಯಕ್ಷೆ ಚರಿಷ್ಮಾ ಕಡಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾತ್ವಿಕ್ ಮಡಪ್ಪಾಡಿ ಸ್ವಾಗತಿಸಿ, ರಶ್ಮಿ ರಜನೀಕಾಂತ್ ಧನ್ಯವಾದಗೈದರು . ಸೌಂದರ್ಯ ಕಡಪಳ ನಿರೂಪಿಸಿದರು.
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸ್ವಾತಂತ್ರ್ಯ ಸಂಗ್ರಾಮದ ನೈಜ ಚಿತ್ರಣ ಬಿಂಬಿಸುವ ಆಸ್ಕರ್ ಪ್ರಶಸ್ತಿ ಪುರಸ್ಕೃತ “ಗಾಂಧಿ” ಚಲನಚಿತ್ರ ಪ್ರದರ್ಶಿಸಲಾಯಿತು.
ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…
ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…
ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…
ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ…