ಪೈಲಾರ್: ಪರಕೀಯರ ಆಕ್ರಮಣವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ನಾವು ಇಂದು ನಮ್ಮದೇ ಸಮಸ್ಯೆ ಗಳಿಂದ ನಲುಗಿ ಹೋಗಿದ್ದೇವೆ.ದೇಶದ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಬೇಕು. ಗಾಂಧಿ ತತ್ವಗಳನ್ನು ರೂಢಿಸಿಕೊಂಡ ಜೀವನ ನಮ್ಮದಾಗಬೇಕು ಎಂದು ಹಿರಿಯ ಸಾಹಿತಿ ,ಶಿಕ್ಷಕ ಲಕ್ಷ್ಮೀಶ ಚೊಕ್ಕಾಡಿ ಹೇಳಿದರು.
ಫ್ರೆಂಡ್ಸ್ ಕ್ಲಬ್ ಪೈಲಾರು ಮತ್ತು ಶೌರ್ಯ ಯುವತಿ ಮಂಡಲ ಪೈಲಾರು ಇವರುಗಳ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಯಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದ ರು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಮೂಕಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಕ್ಲಬ್ ನ ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಮತ್ತು ಶೌರ್ಯ ಯುವತಿ ಮಂಡಲದ ಉಪಾಧ್ಯಕ್ಷೆ ಚರಿಷ್ಮಾ ಕಡಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾತ್ವಿಕ್ ಮಡಪ್ಪಾಡಿ ಸ್ವಾಗತಿಸಿ, ರಶ್ಮಿ ರಜನೀಕಾಂತ್ ಧನ್ಯವಾದಗೈದರು . ಸೌಂದರ್ಯ ಕಡಪಳ ನಿರೂಪಿಸಿದರು.
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸ್ವಾತಂತ್ರ್ಯ ಸಂಗ್ರಾಮದ ನೈಜ ಚಿತ್ರಣ ಬಿಂಬಿಸುವ ಆಸ್ಕರ್ ಪ್ರಶಸ್ತಿ ಪುರಸ್ಕೃತ “ಗಾಂಧಿ” ಚಲನಚಿತ್ರ ಪ್ರದರ್ಶಿಸಲಾಯಿತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…