ಪೈಲಾರ್: ಪರಕೀಯರ ಆಕ್ರಮಣವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ನಾವು ಇಂದು ನಮ್ಮದೇ ಸಮಸ್ಯೆ ಗಳಿಂದ ನಲುಗಿ ಹೋಗಿದ್ದೇವೆ.ದೇಶದ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಬೇಕು. ಗಾಂಧಿ ತತ್ವಗಳನ್ನು ರೂಢಿಸಿಕೊಂಡ ಜೀವನ ನಮ್ಮದಾಗಬೇಕು ಎಂದು ಹಿರಿಯ ಸಾಹಿತಿ ,ಶಿಕ್ಷಕ ಲಕ್ಷ್ಮೀಶ ಚೊಕ್ಕಾಡಿ ಹೇಳಿದರು.
ಫ್ರೆಂಡ್ಸ್ ಕ್ಲಬ್ ಪೈಲಾರು ಮತ್ತು ಶೌರ್ಯ ಯುವತಿ ಮಂಡಲ ಪೈಲಾರು ಇವರುಗಳ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಯಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದ ರು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಮೂಕಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಕ್ಲಬ್ ನ ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಮತ್ತು ಶೌರ್ಯ ಯುವತಿ ಮಂಡಲದ ಉಪಾಧ್ಯಕ್ಷೆ ಚರಿಷ್ಮಾ ಕಡಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾತ್ವಿಕ್ ಮಡಪ್ಪಾಡಿ ಸ್ವಾಗತಿಸಿ, ರಶ್ಮಿ ರಜನೀಕಾಂತ್ ಧನ್ಯವಾದಗೈದರು . ಸೌಂದರ್ಯ ಕಡಪಳ ನಿರೂಪಿಸಿದರು.
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸ್ವಾತಂತ್ರ್ಯ ಸಂಗ್ರಾಮದ ನೈಜ ಚಿತ್ರಣ ಬಿಂಬಿಸುವ ಆಸ್ಕರ್ ಪ್ರಶಸ್ತಿ ಪುರಸ್ಕೃತ “ಗಾಂಧಿ” ಚಲನಚಿತ್ರ ಪ್ರದರ್ಶಿಸಲಾಯಿತು.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…