ಪೈಲಾರ್: ಪರಕೀಯರ ಆಕ್ರಮಣವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ನಾವು ಇಂದು ನಮ್ಮದೇ ಸಮಸ್ಯೆ ಗಳಿಂದ ನಲುಗಿ ಹೋಗಿದ್ದೇವೆ.ದೇಶದ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಬೇಕು. ಗಾಂಧಿ ತತ್ವಗಳನ್ನು ರೂಢಿಸಿಕೊಂಡ ಜೀವನ ನಮ್ಮದಾಗಬೇಕು ಎಂದು ಹಿರಿಯ ಸಾಹಿತಿ ,ಶಿಕ್ಷಕ ಲಕ್ಷ್ಮೀಶ ಚೊಕ್ಕಾಡಿ ಹೇಳಿದರು.
ಫ್ರೆಂಡ್ಸ್ ಕ್ಲಬ್ ಪೈಲಾರು ಮತ್ತು ಶೌರ್ಯ ಯುವತಿ ಮಂಡಲ ಪೈಲಾರು ಇವರುಗಳ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಯಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದ ರು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಮೂಕಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಕ್ಲಬ್ ನ ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಮತ್ತು ಶೌರ್ಯ ಯುವತಿ ಮಂಡಲದ ಉಪಾಧ್ಯಕ್ಷೆ ಚರಿಷ್ಮಾ ಕಡಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾತ್ವಿಕ್ ಮಡಪ್ಪಾಡಿ ಸ್ವಾಗತಿಸಿ, ರಶ್ಮಿ ರಜನೀಕಾಂತ್ ಧನ್ಯವಾದಗೈದರು . ಸೌಂದರ್ಯ ಕಡಪಳ ನಿರೂಪಿಸಿದರು.
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸ್ವಾತಂತ್ರ್ಯ ಸಂಗ್ರಾಮದ ನೈಜ ಚಿತ್ರಣ ಬಿಂಬಿಸುವ ಆಸ್ಕರ್ ಪ್ರಶಸ್ತಿ ಪುರಸ್ಕೃತ “ಗಾಂಧಿ” ಚಲನಚಿತ್ರ ಪ್ರದರ್ಶಿಸಲಾಯಿತು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…