ಸುಳ್ಯ: ದೇಶದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಇಳಿದಿದೆ. ಐದು ರೂ. ಬೆಲೆಯ ಬಿಸ್ಕೆಟ್ ಕೂಡ ಖರೀದಿಸಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ ಎಂದು ಸುಳ್ಯ ಕಾಂಗ್ರೆಸ್ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಆರ್ಥಿಕ ಬೆಳವಣಿಗೆ ಇಲ್ಲದೆ ಬಿಸ್ಕೆಟ್ ಕಂಪೆನಿಗಳು ಕೂಡ ಉತ್ಪಾದನೆ ಕಡಿತ ಮಾಡಿ ಕಾರ್ಮಿಕರನ್ನು ತೆಗೆದು ಹಾಕುತ್ತಿದೆ. ಕೇಂದ್ರ ಸರಕಾರದ ಆರ್ಥಿಕ ನೀತಿಗಳೇ ಇದಕ್ಕೆ ಕಾರಣ. ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಜೊತೆಗೆ ದೇಶದ ವಾಕ್ ಸ್ವಾತಂತ್ರ್ಯಕ್ಕೂ ಕುತ್ತುಬರಹುದಾದ ದಿನಗಳು ದೂರವಿಲ್ಲ ಎಂದರು. ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಬಂಧನ ರಾಜಕೀಯ ಪ್ರೇರಿತವಾಗಿ ನಡೆದಿದೆ. ಸುಳ್ಯ ಕಾಂಗ್ರೆಸ್ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಪ್ರಮುಖರಾದ ನಂದರಾಜ ಸಂಕೇಶ, ಅಚ್ಚುತ ಮಲ್ಕಜೆ, ಲಕ್ಷ್ಮಣ ಶಣೈ ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…