ಸುಳ್ಯ: ದೇಶದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಇಳಿದಿದೆ. ಐದು ರೂ. ಬೆಲೆಯ ಬಿಸ್ಕೆಟ್ ಕೂಡ ಖರೀದಿಸಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ ಎಂದು ಸುಳ್ಯ ಕಾಂಗ್ರೆಸ್ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಆರ್ಥಿಕ ಬೆಳವಣಿಗೆ ಇಲ್ಲದೆ ಬಿಸ್ಕೆಟ್ ಕಂಪೆನಿಗಳು ಕೂಡ ಉತ್ಪಾದನೆ ಕಡಿತ ಮಾಡಿ ಕಾರ್ಮಿಕರನ್ನು ತೆಗೆದು ಹಾಕುತ್ತಿದೆ. ಕೇಂದ್ರ ಸರಕಾರದ ಆರ್ಥಿಕ ನೀತಿಗಳೇ ಇದಕ್ಕೆ ಕಾರಣ. ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಜೊತೆಗೆ ದೇಶದ ವಾಕ್ ಸ್ವಾತಂತ್ರ್ಯಕ್ಕೂ ಕುತ್ತುಬರಹುದಾದ ದಿನಗಳು ದೂರವಿಲ್ಲ ಎಂದರು. ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಬಂಧನ ರಾಜಕೀಯ ಪ್ರೇರಿತವಾಗಿ ನಡೆದಿದೆ. ಸುಳ್ಯ ಕಾಂಗ್ರೆಸ್ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಪ್ರಮುಖರಾದ ನಂದರಾಜ ಸಂಕೇಶ, ಅಚ್ಚುತ ಮಲ್ಕಜೆ, ಲಕ್ಷ್ಮಣ ಶಣೈ ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…