ಗುರುವಾಯೂರು: ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಗುರುವಾಯೂರು ಶ್ರೀಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿ ಸಂದರ್ಭದಲ್ಲಿ ಗುರುವಾಯೂರು ಶ್ರೀಕೃಷ್ಣ ದೈವಸ್ಥಾನದಲ್ಲಿ ದರ್ಶನ ಪಡೆದ ಅವರು ತಾವರೆ ಹೂವಿನಲ್ಲಿ ತುಲಾಬಾರ ಸೇವೆ ನಡೆಸಿದರು. 91 ಕೆ.ಜಿ. ತಾವರೆ ಹೂವಿನಲ್ಲಿ ತುಲಾಬಾರ ನಡೆಸಲಾಯಿತು. ಪ್ರಧಾನಿ ತುಲಾಭಾರಕ್ಕಾಗಿ ತಮಿಳುನಾಡಿನ ಶುಚೀಂದ್ರದಿಂದ 111 ಕೆ.ಜಿ. ತಾವರೆ ಹೂವನ್ನು ತರಿಸಲಾಗಿತ್ತು ಅತ್ಯಂತ ಪವಿತ್ರವಾದ ಮತ್ತು ಇತಿಹಾಸ ಪ್ರಸಿದ್ಧ ದೇವಾಲಯ ಗುರುವಾಯೂರು ಎಂದು ಪ್ರಧಾನಿ ಬಣ್ಷಿಸಿದರು. ಗುರುವಾಯೂರು ದೇವಸ್ಥಾನದ ವಿವಿಧ ಅಭಿವೃದ್ಧಿಗಾಗಿ 450 ಕೋಟಿಯ ವಿವಿಧ ಯೋಜನೆಗಳ ಬೇಡಿಕೆಗಳನ್ನು ದೇವಾಲಯ ಆಡಳಿತ ಪ್ರಧಾನಿಗೆ ಸಲ್ಲಿಸಿದರು. ಈ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…