ಗುರುವಾಯೂರು: ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಗುರುವಾಯೂರು ಶ್ರೀಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿ ಸಂದರ್ಭದಲ್ಲಿ ಗುರುವಾಯೂರು ಶ್ರೀಕೃಷ್ಣ ದೈವಸ್ಥಾನದಲ್ಲಿ ದರ್ಶನ ಪಡೆದ ಅವರು ತಾವರೆ ಹೂವಿನಲ್ಲಿ ತುಲಾಬಾರ ಸೇವೆ ನಡೆಸಿದರು. 91 ಕೆ.ಜಿ. ತಾವರೆ ಹೂವಿನಲ್ಲಿ ತುಲಾಬಾರ ನಡೆಸಲಾಯಿತು. ಪ್ರಧಾನಿ ತುಲಾಭಾರಕ್ಕಾಗಿ ತಮಿಳುನಾಡಿನ ಶುಚೀಂದ್ರದಿಂದ 111 ಕೆ.ಜಿ. ತಾವರೆ ಹೂವನ್ನು ತರಿಸಲಾಗಿತ್ತು ಅತ್ಯಂತ ಪವಿತ್ರವಾದ ಮತ್ತು ಇತಿಹಾಸ ಪ್ರಸಿದ್ಧ ದೇವಾಲಯ ಗುರುವಾಯೂರು ಎಂದು ಪ್ರಧಾನಿ ಬಣ್ಷಿಸಿದರು. ಗುರುವಾಯೂರು ದೇವಸ್ಥಾನದ ವಿವಿಧ ಅಭಿವೃದ್ಧಿಗಾಗಿ 450 ಕೋಟಿಯ ವಿವಿಧ ಯೋಜನೆಗಳ ಬೇಡಿಕೆಗಳನ್ನು ದೇವಾಲಯ ಆಡಳಿತ ಪ್ರಧಾನಿಗೆ ಸಲ್ಲಿಸಿದರು. ಈ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…