ಗುರುವಾಯೂರು: ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಗುರುವಾಯೂರು ಶ್ರೀಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿ ಸಂದರ್ಭದಲ್ಲಿ ಗುರುವಾಯೂರು ಶ್ರೀಕೃಷ್ಣ ದೈವಸ್ಥಾನದಲ್ಲಿ ದರ್ಶನ ಪಡೆದ ಅವರು ತಾವರೆ ಹೂವಿನಲ್ಲಿ ತುಲಾಬಾರ ಸೇವೆ ನಡೆಸಿದರು. 91 ಕೆ.ಜಿ. ತಾವರೆ ಹೂವಿನಲ್ಲಿ ತುಲಾಬಾರ ನಡೆಸಲಾಯಿತು. ಪ್ರಧಾನಿ ತುಲಾಭಾರಕ್ಕಾಗಿ ತಮಿಳುನಾಡಿನ ಶುಚೀಂದ್ರದಿಂದ 111 ಕೆ.ಜಿ. ತಾವರೆ ಹೂವನ್ನು ತರಿಸಲಾಗಿತ್ತು ಅತ್ಯಂತ ಪವಿತ್ರವಾದ ಮತ್ತು ಇತಿಹಾಸ ಪ್ರಸಿದ್ಧ ದೇವಾಲಯ ಗುರುವಾಯೂರು ಎಂದು ಪ್ರಧಾನಿ ಬಣ್ಷಿಸಿದರು. ಗುರುವಾಯೂರು ದೇವಸ್ಥಾನದ ವಿವಿಧ ಅಭಿವೃದ್ಧಿಗಾಗಿ 450 ಕೋಟಿಯ ವಿವಿಧ ಯೋಜನೆಗಳ ಬೇಡಿಕೆಗಳನ್ನು ದೇವಾಲಯ ಆಡಳಿತ ಪ್ರಧಾನಿಗೆ ಸಲ್ಲಿಸಿದರು. ಈ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದರು.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.