ಗುರುವಾಯೂರು: ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಗುರುವಾಯೂರು ಶ್ರೀಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿ ಸಂದರ್ಭದಲ್ಲಿ ಗುರುವಾಯೂರು ಶ್ರೀಕೃಷ್ಣ ದೈವಸ್ಥಾನದಲ್ಲಿ ದರ್ಶನ ಪಡೆದ ಅವರು ತಾವರೆ ಹೂವಿನಲ್ಲಿ ತುಲಾಬಾರ ಸೇವೆ ನಡೆಸಿದರು. 91 ಕೆ.ಜಿ. ತಾವರೆ ಹೂವಿನಲ್ಲಿ ತುಲಾಬಾರ ನಡೆಸಲಾಯಿತು. ಪ್ರಧಾನಿ ತುಲಾಭಾರಕ್ಕಾಗಿ ತಮಿಳುನಾಡಿನ ಶುಚೀಂದ್ರದಿಂದ 111 ಕೆ.ಜಿ. ತಾವರೆ ಹೂವನ್ನು ತರಿಸಲಾಗಿತ್ತು ಅತ್ಯಂತ ಪವಿತ್ರವಾದ ಮತ್ತು ಇತಿಹಾಸ ಪ್ರಸಿದ್ಧ ದೇವಾಲಯ ಗುರುವಾಯೂರು ಎಂದು ಪ್ರಧಾನಿ ಬಣ್ಷಿಸಿದರು. ಗುರುವಾಯೂರು ದೇವಸ್ಥಾನದ ವಿವಿಧ ಅಭಿವೃದ್ಧಿಗಾಗಿ 450 ಕೋಟಿಯ ವಿವಿಧ ಯೋಜನೆಗಳ ಬೇಡಿಕೆಗಳನ್ನು ದೇವಾಲಯ ಆಡಳಿತ ಪ್ರಧಾನಿಗೆ ಸಲ್ಲಿಸಿದರು. ಈ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…