ಗುರುವಾಯೂರು: ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಗುರುವಾಯೂರು ಶ್ರೀಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿ ಸಂದರ್ಭದಲ್ಲಿ ಗುರುವಾಯೂರು ಶ್ರೀಕೃಷ್ಣ ದೈವಸ್ಥಾನದಲ್ಲಿ ದರ್ಶನ ಪಡೆದ ಅವರು ತಾವರೆ ಹೂವಿನಲ್ಲಿ ತುಲಾಬಾರ ಸೇವೆ ನಡೆಸಿದರು. 91 ಕೆ.ಜಿ. ತಾವರೆ ಹೂವಿನಲ್ಲಿ ತುಲಾಬಾರ ನಡೆಸಲಾಯಿತು. ಪ್ರಧಾನಿ ತುಲಾಭಾರಕ್ಕಾಗಿ ತಮಿಳುನಾಡಿನ ಶುಚೀಂದ್ರದಿಂದ 111 ಕೆ.ಜಿ. ತಾವರೆ ಹೂವನ್ನು ತರಿಸಲಾಗಿತ್ತು ಅತ್ಯಂತ ಪವಿತ್ರವಾದ ಮತ್ತು ಇತಿಹಾಸ ಪ್ರಸಿದ್ಧ ದೇವಾಲಯ ಗುರುವಾಯೂರು ಎಂದು ಪ್ರಧಾನಿ ಬಣ್ಷಿಸಿದರು. ಗುರುವಾಯೂರು ದೇವಸ್ಥಾನದ ವಿವಿಧ ಅಭಿವೃದ್ಧಿಗಾಗಿ 450 ಕೋಟಿಯ ವಿವಿಧ ಯೋಜನೆಗಳ ಬೇಡಿಕೆಗಳನ್ನು ದೇವಾಲಯ ಆಡಳಿತ ಪ್ರಧಾನಿಗೆ ಸಲ್ಲಿಸಿದರು. ಈ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…