ಗುರುವಾಯೂರು: ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಗುರುವಾಯೂರು ಶ್ರೀಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿ ಸಂದರ್ಭದಲ್ಲಿ ಗುರುವಾಯೂರು ಶ್ರೀಕೃಷ್ಣ ದೈವಸ್ಥಾನದಲ್ಲಿ ದರ್ಶನ ಪಡೆದ ಅವರು ತಾವರೆ ಹೂವಿನಲ್ಲಿ ತುಲಾಬಾರ ಸೇವೆ ನಡೆಸಿದರು. 91 ಕೆ.ಜಿ. ತಾವರೆ ಹೂವಿನಲ್ಲಿ ತುಲಾಬಾರ ನಡೆಸಲಾಯಿತು. ಪ್ರಧಾನಿ ತುಲಾಭಾರಕ್ಕಾಗಿ ತಮಿಳುನಾಡಿನ ಶುಚೀಂದ್ರದಿಂದ 111 ಕೆ.ಜಿ. ತಾವರೆ ಹೂವನ್ನು ತರಿಸಲಾಗಿತ್ತು ಅತ್ಯಂತ ಪವಿತ್ರವಾದ ಮತ್ತು ಇತಿಹಾಸ ಪ್ರಸಿದ್ಧ ದೇವಾಲಯ ಗುರುವಾಯೂರು ಎಂದು ಪ್ರಧಾನಿ ಬಣ್ಷಿಸಿದರು. ಗುರುವಾಯೂರು ದೇವಸ್ಥಾನದ ವಿವಿಧ ಅಭಿವೃದ್ಧಿಗಾಗಿ 450 ಕೋಟಿಯ ವಿವಿಧ ಯೋಜನೆಗಳ ಬೇಡಿಕೆಗಳನ್ನು ದೇವಾಲಯ ಆಡಳಿತ ಪ್ರಧಾನಿಗೆ ಸಲ್ಲಿಸಿದರು. ಈ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…