Categories: Uncategorized

ದೇಶಭಕ್ತಿಯಷ್ಟೇ ದೇಶಜ್ಞಾನ ಮುಖ್ಯ: ರಾಘವೇಶ್ವರ ಶ್ರೀ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು: ದೇಶಭಕ್ತಿ ಹಾಗೂ ದೇಶಜ್ಞಾನದ ಸಮಗ್ರ ವಿದ್ಯಾವೀರರನ್ನು ಸೃಷ್ಟಿಸಿ, ಅವರು ದೇಶಕ್ಕೆ ಮಾತ್ರವಲ್ಲ ವಿಶ್ವಕ್ಕೆ ಬೆಳಕಾಗುವಂತೆ ಬೆಳೆಸುವುದೇ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಉದ್ದೇಶ ಎಂದು ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

Advertisement
Advertisement

ಗಿರಿನಗರ ರಾಮಾಶ್ರಮದಲ್ಲಿ ಭಾನುವಾರ ನಡೆದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂವಾದ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ದೇಶದ ಬಗ್ಗೆ ಜ್ಞಾನ ಇಲ್ಲದ ದೇಶಭಕ್ತಿಯಿಂದ ಯಾವ ಪ್ರಯೋಜನವೂ ಇಲ್ಲ. ದೇಶವನ್ನು ಸಮರ್ಥವಾಗಿ ಮುನ್ನಡೆಬೇಕಾದರೆ ದೇಶದ ಸಂಸ್ಕೃತಿ, ಪರಂಪರೆ, ವಿದ್ಯೆಗಳ ಅರಿವು ಇರಬೇಕಾದ್ದು ಅನಿವಾರ್ಯ. ಅಂಥವರು ಮಾತ್ರವೇ ದೇಶವನ್ನು ಉಳಿಸಿ ಬೆಳೆಸಬಲ್ಲರು. ಚಂದ್ರಗುಪ್ತನಂಥ ವೀರ- ಜ್ಞಾನಿಗಳನ್ನು ನಿರ್ಮಾಣ ಮಾಡುವುದು ಗುರಿ ಎಂದು ವಿವರಿಸಿದರು.ಧರ್ಮನಿಷ್ಠೆ, ದೇಶನಿಷ್ಠೆ ಇರುವ ಧರ್ಮಯೋಧರ ನಿರ್ಮಾಣ ನಮ್ಮ ಉದ್ದೇಶ. ಚಾಣಕ್ಯ- ಚಂದ್ರಗುಪ್ತರ ಪರಂಪರೆ ಮುಂದುವರಿಯಬೇಕು ಮತ್ತು ಅತ್ಯಪೂರ್ವ ಭಾರತೀಯ ವಿದ್ಯೆ- ಕಲೆಗಳನ್ನು ಉಳಿಸಿ ಬೆಳೆಸುವ ಅನಿವಾರ್ಯತೆ ಇದೆ ಎಂದು ಪ್ರತಿಪಾದಿಸಿದರು.

ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಮಾತನಾಡಿ, ಭಾರತೀಯ ವಿದ್ಯೆಗಳ ಪುನಃಸ್ಥಾಪನೆ ಇದರ ಮುಖ್ಯ ಉದ್ದೇಶ. ಪ್ರತಿಯೊಂದು ವಿವಿಗಳೂ ತಮ್ಮದೇ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಸಮಗ್ರ ಭಾರತೀಯ ಜ್ಞಾನ ಪ್ರಜ್ವಲಿಸಲು ವಿಷ್ಣುಗುಪ್ತ ವಿಶ್ವವಿದ್ಯಾಪೀಠವೇ ತಲೆ ಎತ್ತಬೇಕಾಯಿತು ಎಂದು ಬಣ್ಣಿಸಿದರು. ಭಾರತೀಯ ವಿದ್ಯೆಯ ಮೂಲಕ ಭಾರತ ಪ್ರಕಾಶಮಾನವಾಗಬೇಕು. ಇದು ಇಡೀ ವಿಶ್ವಕ್ಕೆ ಬೆಳಕು ನೀಡಬಲ್ಲ, ಇಪ್ಪತ್ತೊಂದನೇ ಶತಮಾನದ ಮಹತ್ವದ ಐತಿಹಾಸಿಕ ಘಟನೆ ಇದು ಎಂದು ಅಭಿಪ್ರಾಯಪಟ್ಟರು. ತಮ್ಮಲ್ಲಿರುವ ಅಪೂರ್ವ 5000 ಕಲ್ಲಚ್ಚಿನ ಪ್ರತಿಗಳು, ತಾಳೆಗರಿ, ಅಮೂಲ್ಯ ಗ್ರಂಥಗಳನ್ನು ವಿವಿಗೆ ಸಮರ್ಪಿಸುವುದಾಗಿ ಪ್ರಕಟಿಸಿದರು.

ವಿದ್ವಾನ್ ಡಾ.ಎಸ್.ರಂಗನಾಥ್, ಪಾಶ್ಚಾತ್ಯರು ಭಾರತದತ್ತ ಮುಖ ಮಾಡಿರುವ ಹಂತದಲ್ಲಿ ನಾವು ನಮ್ಮತನವನ್ನು ಉಳಿಸಿಕೊಳ್ಳಬೇಕಾದ್ದು ಅನಿವಾರ್ಯ ಎಂದು ಅಭಿಪ್ರಾಯಪಟ್ಟರು. ಪರಂಪರೆಯನ್ನು ಬಿಡದೇ, ಆಧುನೀಕತೆಯನ್ನು ಮೈಗೂಡಿಸಿಕೊಳ್ಳುವುದು ಅಗತ್ಯ ಎಂದರು.

ಹಿರಿಯ ವಕೀಲ ಕೆ.ಜಿ.ರಾಘವನ್, ಪತ್ರಕರ್ತ ವಿನಾಯಕ ಭಟ್ ಮೂರೂರು ಮಾತನಾಡಿದರು. ರಾಘವೇಂದ್ರ ಭಟ್ ಕ್ಯಾದಗಿ ಪ್ರಾಸ್ತಾವಿಕ ಭಾಷಣ ಮಾಡಿದರು. ಮೋಹನ ಭಾಸ್ಕರ ಹೆಗಡೆ ನಿರೂಪಿಸಿದರು. ನ್ಯಾಷನಲ್ ಲಾ ಸ್ಕೂಲ್‍ನ ನಿವೃತ್ತ ಕುಲಪತಿ ಡಾ.ಜಯಗೋವಿಂದ್ ಸಭಾಪೂಜೆ ನೆರವೇರಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

38 minutes ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

13 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

22 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

23 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

23 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago