Advertisement
Categories: Uncategorized

ದೇಶಭಕ್ತಿಯಷ್ಟೇ ದೇಶಜ್ಞಾನ ಮುಖ್ಯ: ರಾಘವೇಶ್ವರ ಶ್ರೀ

Share

ಬೆಂಗಳೂರು: ದೇಶಭಕ್ತಿ ಹಾಗೂ ದೇಶಜ್ಞಾನದ ಸಮಗ್ರ ವಿದ್ಯಾವೀರರನ್ನು ಸೃಷ್ಟಿಸಿ, ಅವರು ದೇಶಕ್ಕೆ ಮಾತ್ರವಲ್ಲ ವಿಶ್ವಕ್ಕೆ ಬೆಳಕಾಗುವಂತೆ ಬೆಳೆಸುವುದೇ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಉದ್ದೇಶ ಎಂದು ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

ಗಿರಿನಗರ ರಾಮಾಶ್ರಮದಲ್ಲಿ ಭಾನುವಾರ ನಡೆದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂವಾದ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ದೇಶದ ಬಗ್ಗೆ ಜ್ಞಾನ ಇಲ್ಲದ ದೇಶಭಕ್ತಿಯಿಂದ ಯಾವ ಪ್ರಯೋಜನವೂ ಇಲ್ಲ. ದೇಶವನ್ನು ಸಮರ್ಥವಾಗಿ ಮುನ್ನಡೆಬೇಕಾದರೆ ದೇಶದ ಸಂಸ್ಕೃತಿ, ಪರಂಪರೆ, ವಿದ್ಯೆಗಳ ಅರಿವು ಇರಬೇಕಾದ್ದು ಅನಿವಾರ್ಯ. ಅಂಥವರು ಮಾತ್ರವೇ ದೇಶವನ್ನು ಉಳಿಸಿ ಬೆಳೆಸಬಲ್ಲರು. ಚಂದ್ರಗುಪ್ತನಂಥ ವೀರ- ಜ್ಞಾನಿಗಳನ್ನು ನಿರ್ಮಾಣ ಮಾಡುವುದು ಗುರಿ ಎಂದು ವಿವರಿಸಿದರು.ಧರ್ಮನಿಷ್ಠೆ, ದೇಶನಿಷ್ಠೆ ಇರುವ ಧರ್ಮಯೋಧರ ನಿರ್ಮಾಣ ನಮ್ಮ ಉದ್ದೇಶ. ಚಾಣಕ್ಯ- ಚಂದ್ರಗುಪ್ತರ ಪರಂಪರೆ ಮುಂದುವರಿಯಬೇಕು ಮತ್ತು ಅತ್ಯಪೂರ್ವ ಭಾರತೀಯ ವಿದ್ಯೆ- ಕಲೆಗಳನ್ನು ಉಳಿಸಿ ಬೆಳೆಸುವ ಅನಿವಾರ್ಯತೆ ಇದೆ ಎಂದು ಪ್ರತಿಪಾದಿಸಿದರು.

Advertisement

ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಮಾತನಾಡಿ, ಭಾರತೀಯ ವಿದ್ಯೆಗಳ ಪುನಃಸ್ಥಾಪನೆ ಇದರ ಮುಖ್ಯ ಉದ್ದೇಶ. ಪ್ರತಿಯೊಂದು ವಿವಿಗಳೂ ತಮ್ಮದೇ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಸಮಗ್ರ ಭಾರತೀಯ ಜ್ಞಾನ ಪ್ರಜ್ವಲಿಸಲು ವಿಷ್ಣುಗುಪ್ತ ವಿಶ್ವವಿದ್ಯಾಪೀಠವೇ ತಲೆ ಎತ್ತಬೇಕಾಯಿತು ಎಂದು ಬಣ್ಣಿಸಿದರು. ಭಾರತೀಯ ವಿದ್ಯೆಯ ಮೂಲಕ ಭಾರತ ಪ್ರಕಾಶಮಾನವಾಗಬೇಕು. ಇದು ಇಡೀ ವಿಶ್ವಕ್ಕೆ ಬೆಳಕು ನೀಡಬಲ್ಲ, ಇಪ್ಪತ್ತೊಂದನೇ ಶತಮಾನದ ಮಹತ್ವದ ಐತಿಹಾಸಿಕ ಘಟನೆ ಇದು ಎಂದು ಅಭಿಪ್ರಾಯಪಟ್ಟರು. ತಮ್ಮಲ್ಲಿರುವ ಅಪೂರ್ವ 5000 ಕಲ್ಲಚ್ಚಿನ ಪ್ರತಿಗಳು, ತಾಳೆಗರಿ, ಅಮೂಲ್ಯ ಗ್ರಂಥಗಳನ್ನು ವಿವಿಗೆ ಸಮರ್ಪಿಸುವುದಾಗಿ ಪ್ರಕಟಿಸಿದರು.

ವಿದ್ವಾನ್ ಡಾ.ಎಸ್.ರಂಗನಾಥ್, ಪಾಶ್ಚಾತ್ಯರು ಭಾರತದತ್ತ ಮುಖ ಮಾಡಿರುವ ಹಂತದಲ್ಲಿ ನಾವು ನಮ್ಮತನವನ್ನು ಉಳಿಸಿಕೊಳ್ಳಬೇಕಾದ್ದು ಅನಿವಾರ್ಯ ಎಂದು ಅಭಿಪ್ರಾಯಪಟ್ಟರು. ಪರಂಪರೆಯನ್ನು ಬಿಡದೇ, ಆಧುನೀಕತೆಯನ್ನು ಮೈಗೂಡಿಸಿಕೊಳ್ಳುವುದು ಅಗತ್ಯ ಎಂದರು.

Advertisement

ಹಿರಿಯ ವಕೀಲ ಕೆ.ಜಿ.ರಾಘವನ್, ಪತ್ರಕರ್ತ ವಿನಾಯಕ ಭಟ್ ಮೂರೂರು ಮಾತನಾಡಿದರು. ರಾಘವೇಂದ್ರ ಭಟ್ ಕ್ಯಾದಗಿ ಪ್ರಾಸ್ತಾವಿಕ ಭಾಷಣ ಮಾಡಿದರು. ಮೋಹನ ಭಾಸ್ಕರ ಹೆಗಡೆ ನಿರೂಪಿಸಿದರು. ನ್ಯಾಷನಲ್ ಲಾ ಸ್ಕೂಲ್‍ನ ನಿವೃತ್ತ ಕುಲಪತಿ ಡಾ.ಜಯಗೋವಿಂದ್ ಸಭಾಪೂಜೆ ನೆರವೇರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

21 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

23 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago