ಹೊಸದಿಲ್ಲಿ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ)ಯನ್ನು ಅಖಿಲ ಭಾರತ ಮಟ್ಟದಲ್ಲಿ ಜಾರಿಗೊಳಿಸುವ ಬಗ್ಗೆ ಸದ್ಯ ಯಾವುದೇ ಚಿಂತನೆ ನಡೆಯುತ್ತಿಲ್ಲವೆಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ. ಎನ್ಸಿಆರ್ ಅನುಷ್ಠಾನದ ಬಗ್ಗೆ ಸಂಸತ್ನಲ್ಲಾಗಲಿ ಅಥವಾ ಕೇಂದ್ರ ಸಂಪುಟದಲ್ಲಾಗಲಿ ಯಾವುದೇ ಚರ್ಚೆಗಳು ನಡೆದಿಲ್ಲವೆಂದು ಅವರು ಹೇಳಿದ್ದಾರೆ.
ಎನ್ಆರ್ಸಿಯನ್ನು ಭಾರತದಾದ್ಯಂತ ಜಾರಿಗೊಳಿಸುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲವೆಂದು ದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದರು. ಆದರೆ ಅಮಿತ್ ಶಾ ಇದಕ್ಕೂ ಮುನ್ನ ನೀಡಿದ ಹೇಳಿಕೆಯೊಂದರಲ್ಲಿ ಕೇಂದ್ರ ಸರಕಾರವು ದೇಶಾದ್ಯಂತ ಎನ್ಸಿಆರ್ ಅನ್ನು ಜಾರಿಗೊಳಿಸಲಿದೆ ಎಂದು ಹೇಳಿದ್ದರು. ಈ ಇಬ್ಬರು ನಾಯಕರು ಎನ್ಸಿಆರ್ ಬಗ್ಗೆ ನೀಡಿದ ವ್ಯತಿರಿಕ್ತ ಹೇಳಿಕೆಗಳ ಬಗ್ಗೆ ಗೊಂದಲ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಇದೀಗ ಸ್ಪಷ್ಟನೆ ನೀಡಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…