ಹೊಸದಿಲ್ಲಿ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ)ಯನ್ನು ಅಖಿಲ ಭಾರತ ಮಟ್ಟದಲ್ಲಿ ಜಾರಿಗೊಳಿಸುವ ಬಗ್ಗೆ ಸದ್ಯ ಯಾವುದೇ ಚಿಂತನೆ ನಡೆಯುತ್ತಿಲ್ಲವೆಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ. ಎನ್ಸಿಆರ್ ಅನುಷ್ಠಾನದ ಬಗ್ಗೆ ಸಂಸತ್ನಲ್ಲಾಗಲಿ ಅಥವಾ ಕೇಂದ್ರ ಸಂಪುಟದಲ್ಲಾಗಲಿ ಯಾವುದೇ ಚರ್ಚೆಗಳು ನಡೆದಿಲ್ಲವೆಂದು ಅವರು ಹೇಳಿದ್ದಾರೆ.
ಎನ್ಆರ್ಸಿಯನ್ನು ಭಾರತದಾದ್ಯಂತ ಜಾರಿಗೊಳಿಸುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲವೆಂದು ದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದರು. ಆದರೆ ಅಮಿತ್ ಶಾ ಇದಕ್ಕೂ ಮುನ್ನ ನೀಡಿದ ಹೇಳಿಕೆಯೊಂದರಲ್ಲಿ ಕೇಂದ್ರ ಸರಕಾರವು ದೇಶಾದ್ಯಂತ ಎನ್ಸಿಆರ್ ಅನ್ನು ಜಾರಿಗೊಳಿಸಲಿದೆ ಎಂದು ಹೇಳಿದ್ದರು. ಈ ಇಬ್ಬರು ನಾಯಕರು ಎನ್ಸಿಆರ್ ಬಗ್ಗೆ ನೀಡಿದ ವ್ಯತಿರಿಕ್ತ ಹೇಳಿಕೆಗಳ ಬಗ್ಗೆ ಗೊಂದಲ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಇದೀಗ ಸ್ಪಷ್ಟನೆ ನೀಡಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…