ದೇಶ ಭಕ್ತಿಯ ಭಾವನೆ ಉದ್ದೀಪನವಾದರೆ ಲೋಕ ಕಲ್ಯಾಣ – ಶಾಸಕ ಅಂಗಾರ

October 6, 2019
9:00 PM

ಸುಳ್ಯ: ದೇಶವು ಅಭಿವೃದ್ಧಿಯಾಗಿ ಲೋಕ ಕಲ್ಯಾಣ ಸಾಧ್ಯವಾಗಲು ನಮ್ಮೆಲ್ಲರಲ್ಲಿ ದೇಶ ಭಕ್ತಿ ಎಂಬ ಭಾವನೆ ಉದ್ದೀಪನಗೊಳ್ಳಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement

ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದಲ್ಲಿ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ನಡೆದ ಸೀತಾರಾಮ ಕಲ್ಯಾಣೋತ್ಸವದ ಅಂಗವಾಗಿ ಏರ್ಪಡಿಸಿದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಭಾವನೆಗಳು ಒಟ್ಟಾಗುವುದರ ಜೊತೆ ಕೊಡುವ ಗುಣ, ಪರಸ್ಪರ ಪ್ರೀತಿ ವಿಶ್ವಾಸಗಳು ಬೆಳೆದರೆ ಮಾತ್ರ ಪರಿವರ್ತನೆ ಸಾಧ್ಯ. ಭಜನೆ ನಮ್ಮ ಜೀವನದ ಭಾಗವಾಗಬೇಕು. ಭಕ್ತಿ ಭಾವದ ಭಜನೆಯಿಂದ ಮುಕ್ತಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ದಾಸ ಸಂಕೀರ್ತನಕಾರರಾದ ರಾಮಕೃಷ್ಣ ಕಾಟುಕುಕ್ಕೆಯವರಿಗೆ ಗುರುವಂದನೆ ಸಲ್ಲಿಸಲಾಯಿತು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ಸುಳ್ಯ ತಾಲೂಕು ಭಾರತೀಯ ಮಜ್ದೂರು ಸಂಘ ಅಧ್ಯಕ್ಷ ಗೋಪಾಲಕೃಷ್ಣ ಭಟ್, ದ.ಕ.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮತ್ತು ದೀಪಾಂಜಲಿ ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಸುಮಾ ಸುಬ್ಬಾರಾವ್, ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ ದಾಸ್ ಅತಿಥಿಗಳಾಗಿ ಉಪಸ್ಥಿತರಿದ್ದರು.

ದೀಪಾಂಜಲಿ ಮಹಿಳಾ ಮಂಡಲದ ಅಧ್ಯಕ್ಷೆ ಹರ್ಷ ಕರುಣಾಕರ ಸೇರ್ಕಜೆ ಸ್ವಾಗತಿಸಿ, ಕುಸುಮಾ ಮೋಂಟಡ್ಕ ವಂದಿಸಿದರು. ಹೇಮಲತಾ ಗಣೇಶ್ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ
ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror

Join Our Group