ಸುಳ್ಯ: ದೇಶವು ಅಭಿವೃದ್ಧಿಯಾಗಿ ಲೋಕ ಕಲ್ಯಾಣ ಸಾಧ್ಯವಾಗಲು ನಮ್ಮೆಲ್ಲರಲ್ಲಿ ದೇಶ ಭಕ್ತಿ ಎಂಬ ಭಾವನೆ ಉದ್ದೀಪನಗೊಳ್ಳಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.
ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದಲ್ಲಿ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ನಡೆದ ಸೀತಾರಾಮ ಕಲ್ಯಾಣೋತ್ಸವದ ಅಂಗವಾಗಿ ಏರ್ಪಡಿಸಿದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಭಾವನೆಗಳು ಒಟ್ಟಾಗುವುದರ ಜೊತೆ ಕೊಡುವ ಗುಣ, ಪರಸ್ಪರ ಪ್ರೀತಿ ವಿಶ್ವಾಸಗಳು ಬೆಳೆದರೆ ಮಾತ್ರ ಪರಿವರ್ತನೆ ಸಾಧ್ಯ. ಭಜನೆ ನಮ್ಮ ಜೀವನದ ಭಾಗವಾಗಬೇಕು. ಭಕ್ತಿ ಭಾವದ ಭಜನೆಯಿಂದ ಮುಕ್ತಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ದಾಸ ಸಂಕೀರ್ತನಕಾರರಾದ ರಾಮಕೃಷ್ಣ ಕಾಟುಕುಕ್ಕೆಯವರಿಗೆ ಗುರುವಂದನೆ ಸಲ್ಲಿಸಲಾಯಿತು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ಸುಳ್ಯ ತಾಲೂಕು ಭಾರತೀಯ ಮಜ್ದೂರು ಸಂಘ ಅಧ್ಯಕ್ಷ ಗೋಪಾಲಕೃಷ್ಣ ಭಟ್, ದ.ಕ.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮತ್ತು ದೀಪಾಂಜಲಿ ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಸುಮಾ ಸುಬ್ಬಾರಾವ್, ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ ದಾಸ್ ಅತಿಥಿಗಳಾಗಿ ಉಪಸ್ಥಿತರಿದ್ದರು.
ದೀಪಾಂಜಲಿ ಮಹಿಳಾ ಮಂಡಲದ ಅಧ್ಯಕ್ಷೆ ಹರ್ಷ ಕರುಣಾಕರ ಸೇರ್ಕಜೆ ಸ್ವಾಗತಿಸಿ, ಕುಸುಮಾ ಮೋಂಟಡ್ಕ ವಂದಿಸಿದರು. ಹೇಮಲತಾ ಗಣೇಶ್ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…