Advertisement
ಸುದ್ದಿಗಳು

ದೇಶ ಭಕ್ತಿಯ ಭಾವನೆ ಉದ್ದೀಪನವಾದರೆ ಲೋಕ ಕಲ್ಯಾಣ – ಶಾಸಕ ಅಂಗಾರ

Share

ಸುಳ್ಯ: ದೇಶವು ಅಭಿವೃದ್ಧಿಯಾಗಿ ಲೋಕ ಕಲ್ಯಾಣ ಸಾಧ್ಯವಾಗಲು ನಮ್ಮೆಲ್ಲರಲ್ಲಿ ದೇಶ ಭಕ್ತಿ ಎಂಬ ಭಾವನೆ ಉದ್ದೀಪನಗೊಳ್ಳಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದಲ್ಲಿ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ನಡೆದ ಸೀತಾರಾಮ ಕಲ್ಯಾಣೋತ್ಸವದ ಅಂಗವಾಗಿ ಏರ್ಪಡಿಸಿದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಭಾವನೆಗಳು ಒಟ್ಟಾಗುವುದರ ಜೊತೆ ಕೊಡುವ ಗುಣ, ಪರಸ್ಪರ ಪ್ರೀತಿ ವಿಶ್ವಾಸಗಳು ಬೆಳೆದರೆ ಮಾತ್ರ ಪರಿವರ್ತನೆ ಸಾಧ್ಯ. ಭಜನೆ ನಮ್ಮ ಜೀವನದ ಭಾಗವಾಗಬೇಕು. ಭಕ್ತಿ ಭಾವದ ಭಜನೆಯಿಂದ ಮುಕ್ತಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ದಾಸ ಸಂಕೀರ್ತನಕಾರರಾದ ರಾಮಕೃಷ್ಣ ಕಾಟುಕುಕ್ಕೆಯವರಿಗೆ ಗುರುವಂದನೆ ಸಲ್ಲಿಸಲಾಯಿತು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ಸುಳ್ಯ ತಾಲೂಕು ಭಾರತೀಯ ಮಜ್ದೂರು ಸಂಘ ಅಧ್ಯಕ್ಷ ಗೋಪಾಲಕೃಷ್ಣ ಭಟ್, ದ.ಕ.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮತ್ತು ದೀಪಾಂಜಲಿ ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಸುಮಾ ಸುಬ್ಬಾರಾವ್, ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ ದಾಸ್ ಅತಿಥಿಗಳಾಗಿ ಉಪಸ್ಥಿತರಿದ್ದರು.

ದೀಪಾಂಜಲಿ ಮಹಿಳಾ ಮಂಡಲದ ಅಧ್ಯಕ್ಷೆ ಹರ್ಷ ಕರುಣಾಕರ ಸೇರ್ಕಜೆ ಸ್ವಾಗತಿಸಿ, ಕುಸುಮಾ ಮೋಂಟಡ್ಕ ವಂದಿಸಿದರು. ಹೇಮಲತಾ ಗಣೇಶ್ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

6 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

17 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

17 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 days ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago