ಸುದ್ದಿಗಳು

ದೇಸೀ ಆಟಗಳು ಸೃಜನಶೀಲತೆಯನ್ನು ಹೆಚ್ಚಿಸುತ್ತವೆ – ಹರಿಣಿ ಪುತ್ತೂರಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಆಧುನಿಕ ಯುಗದ ಭರಾಟೆಯಲ್ಲಿ ದೇಸೀ ಆಟಗಳು ಮರೆತು ಹೋಗುತ್ತಿವೆ. ಸೃಜನಶೀಲತೆಯನ್ನು ಹೆಚ್ಚಿಸುವ, ಮನುಷ್ಯ-ಮನುಷ್ಯನನ್ನು ಹತ್ತಿರಕ್ಕೆತರುವ ಚೆನ್ನೆಮಣೆಯಂತಹ ಆಟಗಳನ್ನು ನೆನಪಿಸುವ ಮತ್ತುಅದನ್ನು ಪರಿಚಯಿಸುವ ರೆಡ್‍ಕ್ರಾಸ್‍ ಘಟಕದ ಕಾರ್ಯ ಶ್ಲಾಘನೀಯ ಎಂದು ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅಭಿಪ್ರಾಯಪಟ್ಟರು.

Advertisement
Advertisement

ಅವರು ಸುಳ್ಯದ ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್‍ಘಟಕ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಹಮ್ಮಿಕೊಂಡ“ಆಟಿಯ ನೆನಪು”ಕಾರ್ಯಕ್ರಮದ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡ ಚೆನ್ನೆಮಣೆ ಸ್ಪರ್ಧೆಯನ್ನುಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ರತ್ನಾವತಿ ಡಿ ಮಾತನಾಡಿ, ಮಾನವೀಯ ಸಂಬಂಧವನ್ನು ಗಟ್ಟಿಗೊಳಿಸುವ ಆಟ ಚೆನ್ನೆಮಣೆ. ಇಂತಹ ಸ್ಪರ್ಧೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮನಸ್ಸು ಉಲ್ಲಸಿತಗೊಳ್ಳುತ್ತದೆ ಎಂದರು. ಕಾರ್ಯಕ್ರಮಾಧಿಕಾರಿಡಾ. ಅನುರಾಧಾಕುರುಂಜಿ ಮಾತನಾಡಿಜನಪದ ಆಟ ಹಾಗೂ ಆಚರಣೆಗಳು ಗ್ರಾಮೀಣಜನತೆಯ ಬದುಕಿನಲ್ಲಿ ಹಾಸುಹೊಕ್ಕಾಗಿರುತ್ತದೆ.ಅದರಲ್ಲೂಆಟಿ ತಿಂಗಳಲ್ಲಿ ಆಡುವಚೆನ್ನೆಮಣೆ ಆಟ ಬಾಂಧವ್ಯವನ್ನು ಬೆಸೆಯುವ ಕೆಲಸ ಮಾಡುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸಿ ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತೇವೆಎಂದರು.

ಕಾಲೇಜಿನ ವಿದ್ಯಾರ್ಥಿ ಸಂಘದಅಧ್ಯಕ್ಷ ಶ್ರೀಕೃಷ್ಣಪ್ರಸಾದ್, ರೆಡ್‍ಕ್ರಾಸ್‍ಘಟಕ ನಾಯಕರಾದ ಭುವನ್ ಪಿ, ಕುಮುದಾ ಬಿ ಎಸ್, ಮಹೇಶ್ವರಿ ಪಿ, ಬ್ರಿಜೇಶ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೇಘಾಕೃಷ್ಣ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಜಯಮಾಲ ಸ್ವಾಗತಿಸಿ ರಚನಾ ಬಿ ಎನ್ ವಂದಿಸಿದರು. ಹವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

3 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

12 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

12 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

13 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

13 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

13 hours ago